ಕನ್ನಡಪ್ರಭವಾರ್ತೆ ಸೋಮವಾರಪೇಟೆ
ನಂತರ ಅವರು ಮಾತನಾಡಿ, ರೋಟರಿ ಸಂಸ್ಥೆಯೂ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ರೋಟರಿ ಸದಸ್ಯರು ಪ್ರತಿಫಲಾಫೇಕ್ಷೆಯಿಲ್ಲದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜದ ಪ್ರತಿಯೊಬ್ಬರೂ ತಾವು ಸಂಪಾದಿಸಿದ ಹಣದಲ್ಲಿ ಅಲ್ಪ ಹಣವನ್ನು ಸಮಾಜಸೇವೆಗೆ ಉಪಯೋಗಿಸಿದರೆ ಅದು ಪುಣ್ಯ ಕಾರ್ಯ ಎಂದು ಹೇಳಿದರು.
ರೋಟರಿ ಸಹಾಯಕ ಪ್ರಾಂತಪಾಲ ಡಾ. ಹರಿ ಎ. ಶೆಟ್ಟಿ. ಸೋಮವಾರಪೇಟೆ ರೋಟರಿ ಹಿಲ್ಸ್ ಅಧ್ಯಕ್ಷ ಜೆ.ಕೆ.ಪೊನ್ನಪ್ಪ, ಕಾರ್ಯದರ್ಶಿ ಕೆ.ಡಿ.ಬಿದ್ದಪ್ಪ, ರೋಟರಿ ಕುಶಾಲನಗರ ಅಧ್ಯಕ್ಷ ಸಿ.ಬಿ.ಹರೀಶ್, ಕಾರ್ಯದರ್ಶಿ ಡಿ.ಡಿ. ಕಿರಣ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಇದ್ದರು.