ನೀರಿನಾಸರೆಗಳ ಗಣತಿ ಕಾರ್ಯಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ
ನೀರಾವರಿ ನೀತಿಗಳನ್ನು ರೂಪಿಸಲು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ವತಿಯಿಂದ 7ನೇ ಸಣ್ಣ ನೀರಾವರಿ ಗಣತಿ - ನೀರಿನ ಮೂಲಗಳ ಸಮೀಕ್ಷೆಯನ್ನು ಜೂನ್ನಿಂದ ಅಕ್ಟೋಬರ್ ಅಂತ್ಯದ ವರೆಗೆ ನಡೆಯಲಿದ್ದು, ಸಾರ್ವಜನಿಕರು ಈ ಗಣತಿಗೆ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ 7ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಕಾರ್ಯಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲ ವಿಧದ ಸಣ್ಣ ನೀರಾವರಿ ಯೋಜನೆಗಳ, ನೀರಿನ ಆಸರೆಗಳ ಸಮಗ್ರ, ನಂಬಲರ್ಹ ಮೂಲಗಳ ಅಂಕಿಅಂಶಗಳ ಸಂಗ್ರಹಣೆ, ಭವಿಷ್ಯದಲ್ಲಿ ಅವುಗಳ ಸದ್ಬಳಕೆ, ನಿರ್ವಹಣೆ ಹಾಗೂ ಆದಾಯ ಸಂಗ್ರಹಣೆ, ಹೊಸ ಯೋಜನೆಗಳಿಗೆ ರೂಪ ಕೊಡುವುದು ಸೇರಿದಂತೆ ಪರಿಣಾಮಕಾರಿ ಯೋಜನೆಗಳು ಮತ್ತು ನೀತಿಗಳ ನಿರೂಪಣೆ ಕೈಗೊಳ್ಳಲು ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿಗಳು ಅನುಕೂಲವಾಗಿಲಿವೆ ಎಂದರು.ನೀರಿನಾಸರೆಗಳ ಗಣತಿಯಲ್ಲಿ ನೈಸರ್ಗಿಕ ಹಾಗೂ ಮಾನವ ನಿರ್ಮಿತ ಎಲ್ಲ ನೀರಿನ ಆಸರೆಗಳ ಅಚ್ಚುಕಟ್ಟುಗಳ ಪ್ರಮಾಣ ಲೆಕ್ಕಿಸದೇ ಮಾಹಿತಿ ಸಂಗ್ರಹಿಸಲಾಗುವುದು ಎಂದ ಅವರು, ಗ್ರಾಮ ಹಾಗೂ ನಗರ ಅಂತರ್ಜಲ ಯೋಜನೆಗಳಾದ ಅಗೆದ ಬಾವಿ, ವಿವಿಧ ಕೊಳವೆ ಬಾವಿಗಳ ಮಾಹಿತಿ, ಜಲ ಯೋಜನೆಗಳಾದ ಮೇಲ್ಮೈ ಹರಿವು ಹಾಗೂ ಏತ ನೀರಾವರಿ ಯೋಜನೆಗಳನ್ನು ಒಳಗೊಂಡಿರುವಂತೆ ಮಾಹಿತಿ ಕಲೆ ಹಾಕಬೇಕು ಎಂದು ಹೇಳಿದರು.ನೀರಾವರಿ ಅಥವಾ ಇತರೆ ಉದ್ದೇಶಗಳಾದ ಕೈಗಾರಿಕೆ, ಮೀನುಗಾರಿಕೆ, ಕುಡಿಯುವ ನೀರು, ಆಟೋಟ ಮನೋರಂಜನೆ, ಧಾರ್ಮಿಕ ಅಂತರ್ಜಲ ಪುನಃಶ್ಚೇತನ, ಕೃಷಿ ಹೊಂಡ ಮುಂತಾದವುಗಳಲ್ಲಿ ಬಳಕೆಯಾಗುವ ಎಲ್ಲ ನೀರಿನ ಆಸರೆಗಳನ್ನು ಈ ಗಣತಿಯಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಿದರು.ಕಳೆದ ಗಣತಿಯಲ್ಲಿ 18809 ಯೋಜನೆಗಳು: