ಪೊಲೀಸ್ ಅಧಿಕಾರಿಗಳ ಬೀಳ್ಕೊಡುಗೆ, ಸ್ವಾಗತ ಸಮಾರಂಭ
ಸಾರ್ವಜನಿಕರು ಭಯಬಿಟ್ಟು ಮುಕ್ತವಾಗಿ ಠಾಣೆಗೆ ಬಂದು ಸಮಸ್ಯೆ ಪರಿಹರಿಸಿಕೊಂಡು, ಧೈರ್ಯವಾಗಿ ತೆರಳಬೇಕು ಎಂದು ನೂತನ ಪಿಎಸ್ಐ ವರ್ಷ ಅಭಿಪ್ರಾಯಪಟ್ಟರು.
ನಗರದ ವೆಂಕಟೇಶ್ವರ ಮಹಲ್ನಲ್ಲಿ ಪೊಲೀಸ್ ಇಲಾಖಾ ಸಿಬ್ಬಂದಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.ನಾನು ಕೊಳ್ಳೇಗಾಲ ಪಟ್ಟಣದ ಕಾನೂನು ಸುವ್ಯವಸ್ಥೆ ಕಾಪಾಡಲು ಬಂದಿದ್ದು, ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಬದಲಿಗೆ ನನ್ನ ಕೆಲಸ ಮಾತನಾಡಬೇಕು, ಹಾಗೆ ಕೆಲಸ ಮಾಡಲು ಇಚ್ಛಿಸುತ್ತೇನೆ ಎಂದು ವರ್ಷ ಹೇಳಿದರು.
ಸಾರ್ವಜನಿಕರು ಮುಕ್ತವಾಗಿ ಠಾಣೆಗೆ ಬನ್ನಿ, ನಿಮ್ಮ ಸಮಸ್ಯೆ ಬಗೆಹರಿಸುವೆ, ಧೈರ್ಯದಿಂದ ಬಂದು ನಿಮ್ಮ ಸಮಸ್ಯೆ ಹಂಚಿಕೊಳ್ಳಿ, ಏನೇ ಸಮಸ್ಯೆಗಳಿದ್ದರೂ ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದರು.
ಬೀಳ್ಕೊಡುಗೆ ಸ್ವೀಕರಿಸಿದ ಪಿಎಸೈ ಮಹೇಶ್ ಕುಮಾರ್ ಮಾತನಾಡಿ, ಶಿವಕುಮಾರಸ್ವಾಮಿ ಬಡಾವಣೆಯ ಕಳ್ಳತನ ಪತ್ತೆ ಹಚ್ಚುವಲ್ಲಿ ಇಲಾಖೆ ನೀಡಿದ ಸಹಕಾರ ಸ್ಮರಿಸುವೆ. ಕೊಳ್ಳೇಗಾಲದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಸಾರ್ವಜನಿಕರು ನೀಡಿದ ಸಹಕಾರ ಕಾರಣ, ಮುಂದೆಯೂ ಸಹ ವರ್ಷ ಅವರು ಉತ್ತಮ ರೀತಿ ಕೆಲಸ ಮಾಡಲು ನಮ್ಮೆಲ್ಲ ಸಿಬ್ಬಂದಿ ಹೆಚ್ಚಿನ ಸಹಕಾರ ನೀಡಿ ಎಂದರು.
ಅಪರಾಧ ವಿಭಾಗದ ಪಿಎಸ್ಐ ಚೆಲುವರಾಜು, ಭೀಮನಗರದ ಯಜಮಾನರು, ಕರವೇ ಕಾರ್ಯಕರ್ತರು, ರೈತ ಸಂಘದ ಪದಾಧಿಕಾರಿಗಳು, ಕಾರು ಮತ್ತು ಆಟೋ ಚಾಲಕರು ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಇದ್ದರು.