ಗೆಜ್ಜಲಗೆರೆ ಗ್ರಾಪಂನಲ್ಲಿ ಸಾರ್ವಜನಿಕ ಕೆಲಸ ಸ್ಥಗಿತ: ಪಿಡಿಒಗೆ ಘೇರಾವ್‌ ಹಾಕಿ ಪ್ರತಿಭಟನಾಕಾರರ ಆಕ್ರೋಶ

KannadaprabhaNewsNetwork |  
Published : Jan 07, 2026, 01:45 AM IST
6ಕೆಎಂಎನ್‌ಡಿ-9ಧರಣಿ ನಿರತರು ಗ್ರಾಮ ಪಂಚಾಯಿತಿ ಪಿಡಿಒ ವೆಂಕಟೇಶ್ ಅವರನ್ನು ಘೇರಾವ್‌ ಮಾಡಿ ತರಾಟೆಗೆ ತೆಗೆದುಕೊಂಡರು . | Kannada Prabha

ಸಾರಾಂಶ

ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಗೌರವ ಧನ ಬಿಡುಗಡೆ, ಸಾರ್ವಜನಿಕರ ಇ- ಸ್ವತ್ತು ಮತ್ತಿತರ ಕೆಲಸ ಕಾರ್ಯಗಳನ್ನು ಮಾಡದೆ ಕಾಲ ಹರಣ ಮಾಡುತ್ತಿರುವ ಪಿಡಿಒ ವೆಂಕಟೇಶ್ ವಿರುದ್ಧ ಹರಿಹಾಯ್ದು ತರಾಟೆಗೆ ತೆಗೆದುಕೊಂಡರು.

ಕನ್ನಡಪ್ರಭ ವಾರ್ತೆ ಮದ್ದೂರು

ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆ ವಿರೋಧಿಸಿ ಗ್ರಾಮಸ್ಥರು ಕಳೆದ 16 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸಹ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳ ಸ್ಥಗಿತಗೊಳಿಸಿರುವ ಅಧಿಕಾರಿಗಳ ಕ್ರಮ ವಿರೋಧಿಸಿ ಹೋರಾಟಗಾರರು ಮಂಗಳವಾರ ಗೆಜ್ಜಲಗೆರೆ ಗ್ರಾಮದ ಪಿಡಿಒ ವೆಂಕಟೇಶ್ ಅವರಿಗೆ ಘೇರಾವ್‌ ಹಾಕಿದ ಘಟನೆ ಜರುಗಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಗೌರವ ಧನ ಬಿಡುಗಡೆ, ಸಾರ್ವಜನಿಕರ ಇ- ಸ್ವತ್ತು ಮತ್ತಿತರ ಕೆಲಸ ಕಾರ್ಯಗಳನ್ನು ಮಾಡದೆ ಕಾಲ ಹರಣ ಮಾಡುತ್ತಿರುವ ಪಿಡಿಒ ವೆಂಕಟೇಶ್ ವಿರುದ್ಧ ಹರಿಹಾಯ್ದು ತರಾಟೆಗೆ ತೆಗೆದುಕೊಂಡರು.

ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ವಿಚಾರದಲ್ಲಿ ಕ್ಷೇತ್ರದ ಶಾಸಕರ ಗುಲಾಮರಂತೆ ವರ್ತಿಸುತ್ತಿರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಜನರನ್ನು ಬೀದಿಗೆ ತಂದು ನಿಲ್ಲುವ ಪರಿಸ್ಥಿತಿಯನ್ನು ತಂದೊಡ್ಡಿದ್ದಾರೆ ಎಂದು ಕಿಡಿಕಾರಿದರು. ನಮ್ಮ ಹೋರಾಟದಿಂದಾಗಿ ಪರಿಸ್ಥಿತಿ ಬಿಗಡಾಯಿಸಬಾರದು ಎಂಬ ಕಾರಣಕ್ಕೆ ನಾವುಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ನಡೆಸುವ ಮೂಲಕ ತಾಳ್ಮೆಯಿಂದ ವರ್ತಿಸುತ್ತಿದ್ದೇವೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಶಾಸಕರೇ ಹೊಣೆ ಯಾಗಬೇಕಾಗುತ್ತದೆ ಎಂದು ಜನಪ್ರತಿನಿಧಿಗಳು ಮತ್ತು ರೈತ ಮುಖಂಡರು ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ