
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗ ಪಡೆಯಲು ಚರ್ಚಿಸಲಾಯಿತು. ಯುವ ನಿಧಿ ಯೋಜನೆ ಅರ್ಹತೆ ಕುರಿತು ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿದರು.
2024-25 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು (ಪದವಿ-3000, ಡಿಪ್ಲೋಮಾ -1500.) ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 3 ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆ ಕುರಿತು ಜಾಹೀರಾತು ನೀಡುವಂತೆ ಪೊನ್ನಂಪೇಟೆ ತಾ.ಪಂ.ಗ್ಯಾರಂಟಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು.ಅನ್ನಭಾಗ್ಯ: ಪೊನ್ನಂಪೇಟೆ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಎಸ್.ಸಿ/ ಎಸ್.ಟಿ ಗಳ ಜಾತಿ ಪ್ರಮಾಣ ಪತ್ರವನ್ನು ರೇಷನ್ ಕಾರ್ಡ್ಗೆ ಲಿಂಕ್ ಮಾಡುವ ಕಾರ್ಯ ನಡೆಯುತ್ತಿದ್ದು, ರೇಷನ್ ಕಾರ್ಡ್ ಹೊಂದಿರುವವರು ಎಲ್ಲರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಸಭೆಗೆ ಮಾಹಿತಿ ನೀಡಿದರು.
ಯೋಜನೆಗಳ ಅನುಷ್ಠಾನ ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ರಾಜೇಶ್, ಗ್ಯಾರಂಟಿ ಯೋಜನೆ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.