ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರಯತ್ನದಿಂದ ಉತ್ತಮ ಫಲಿತಾಂಶ ಬಂದಿದೆ. ಹೆಚ್ಚಿನ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಸಂಸ್ಥೆಯ ಖಜಾಂಚಿ ಕೆ.ಈ. ಕಾಂತೇಶ್ ಮಾತನಾಡಿ, ಒಟ್ಟಿಗೆ 697 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 693 ವಿದ್ಯಾರ್ಥಿಗಳು ಪಾಸಾಗಿದ್ದು, ಅದರಲ್ಲಿ ಅತ್ಯುತ್ತಮ ಶ್ರೇಣಿ 479, ಪ್ರಥಮ ದರ್ಜೆ 210, ದ್ವಿತೀಯ ದರ್ಜೆ 4 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಹಿಂದಿ-2, ಸಂಸ್ಕೃತ-50, ಭೌತಶಾಸ್ತ್ರ-12, ರಾಸಾಯನ ಶಾಸ್ತ್ರ-1, ಗಣಿತಶಾಸ್ತ್ರ-40, ಜೀವಶಾಸ್ತ್ರ-5, ಕಂಪ್ಯೂಟರ್ ಸೈನ್ಸ್ನಲ್ಲಿ-37 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ನಮ್ಮ ಈ ಸಾಧನೆಯ ವಿಶೇಷವೇನೆಂದರೆ ನಮ್ಮ ಕಾಲೇಜಿನ ಮಕ್ಕಳಿಗೆ ಟ್ಯೂಷನ್ಗೆ ಹೋಗುವ ಅಗತ್ಯವೇ ಇರುವುದಿಲ್ಲ. ನಮ್ಮಲ್ಲೇ ಎಲ್ಲಾ ಸೌಲಭ್ಯ ಮತ್ತು ಮಾರ್ಗದರ್ಶನ ಸಿಗುವುದರಿಂದ ಹೊರಗಡೆ ಹೋಗುವ ಅವಕಾಶವೇ ಇಲ್ಲ. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದರು.ಮಹೀನ್ ಖಾನಮ್ ಅಫ್ರಿದಿ 600ಕ್ಕೆ 596 ಅಂಕ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾಳೆ. ಎಂ.ಎಸ್.ಸಾದ್ವಿ 594 ಅಂಕ ಪಡೆದು ಜಿಲ್ಲೆಗೆ ತೃತೀಯ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾಳೆ. ಯು.ವಿ.ಅಂಕಿತ್ 589, ಧೃತಿ ಎಚ್. ಭಟ್ 589, ಪಿ.ಓ.ಸಿಂಚನ 589 ಅಂಕಗಳಿಸಿ ಕಾಲೇಜಿಗೆ 3ನೇ ಸ್ಥಾನ ಪಡೆದಿದ್ದಾರೆ ಎಂದರು.
ಹೆಚ್ಚಿನ ಅಂಕಗಳಿಸಿದ ಮಹೀನ್ ಖಾನಮ್ ಅಫ್ರಿದಿ ಮಾತನಾಡಿ, ಕಾಲೇಜಿನಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಎಲ್ಲಾ ಉಪನ್ಯಾಸಕರ ಉತ್ತಮ ಮಾರ್ಗದರ್ಶನ ಸಲಹೆ ಮತ್ತು ನಮಗೆ ಯಾವುದೇ ಅನುಮಾನವಿದ್ದರೂ ವಿಶೇಷವಾಗಿ ಕರೆದು ಮಾರ್ಗದರ್ಶನ ನೀಡಿದ್ದರಿಂದ ನನಗೆ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದರು.