ಪಿಯುಸಿ ಪರೀಕ್ಷೆ: ಪೇಸ್ ಕಾಲೇಜಿಗೆ ಉತ್ತಮ ಫಲಿತಾಂಶ

KannadaprabhaNewsNetwork |  
Published : Apr 11, 2026, 01:30 AM IST
ಪೊಟೋ: 10ಎಸ್‌ಎಂಜಿಕೆಪಿ02ಶಿವಮೊಗದ ಪತ್ರಿಕಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಅಂಕ ಪಡೆದ ಪೇಸ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.  | Kannada Prabha

ಸಾರಾಂಶ

ಪೇಸ್ ಯು.ಎಂ.ಪಿ.ಯು. ಕಾಲೇಜಿನಲ್ಲಿ ಈ ಬಾರಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ 99.42 ಆಗಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲೇ 4ನೇ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪೇಸ್ ಯು.ಎಂ.ಪಿ.ಯು. ಕಾಲೇಜಿನಲ್ಲಿ ಈ ಬಾರಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ 99.42 ಆಗಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲೇ 4ನೇ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರಯತ್ನದಿಂದ ಉತ್ತಮ ಫಲಿತಾಂಶ ಬಂದಿದೆ. ಹೆಚ್ಚಿನ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಸಂಸ್ಥೆಯ ಖಜಾಂಚಿ ಕೆ.ಈ. ಕಾಂತೇಶ್ ಮಾತನಾಡಿ, ಒಟ್ಟಿಗೆ 697 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 693 ವಿದ್ಯಾರ್ಥಿಗಳು ಪಾಸಾಗಿದ್ದು, ಅದರಲ್ಲಿ ಅತ್ಯುತ್ತಮ ಶ್ರೇಣಿ 479, ಪ್ರಥಮ ದರ್ಜೆ 210, ದ್ವಿತೀಯ ದರ್ಜೆ 4 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಹಿಂದಿ-2, ಸಂಸ್ಕೃತ-50, ಭೌತಶಾಸ್ತ್ರ-12, ರಾಸಾಯನ ಶಾಸ್ತ್ರ-1, ಗಣಿತಶಾಸ್ತ್ರ-40, ಜೀವಶಾಸ್ತ್ರ-5, ಕಂಪ್ಯೂಟರ್ ಸೈನ್ಸ್‌ನಲ್ಲಿ-37 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ನಮ್ಮ ಈ ಸಾಧನೆಯ ವಿಶೇಷವೇನೆಂದರೆ ನಮ್ಮ ಕಾಲೇಜಿನ ಮಕ್ಕಳಿಗೆ ಟ್ಯೂಷನ್‌ಗೆ ಹೋಗುವ ಅಗತ್ಯವೇ ಇರುವುದಿಲ್ಲ. ನಮ್ಮಲ್ಲೇ ಎಲ್ಲಾ ಸೌಲಭ್ಯ ಮತ್ತು ಮಾರ್ಗದರ್ಶನ ಸಿಗುವುದರಿಂದ ಹೊರಗಡೆ ಹೋಗುವ ಅವಕಾಶವೇ ಇಲ್ಲ. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದರು.

ಮಹೀನ್ ಖಾನಮ್ ಅಫ್ರಿದಿ 600ಕ್ಕೆ 596 ಅಂಕ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾಳೆ. ಎಂ.ಎಸ್.ಸಾದ್ವಿ 594 ಅಂಕ ಪಡೆದು ಜಿಲ್ಲೆಗೆ ತೃತೀಯ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾಳೆ. ಯು.ವಿ.ಅಂಕಿತ್ 589, ಧೃತಿ ಎಚ್. ಭಟ್ 589, ಪಿ.ಓ.ಸಿಂಚನ 589 ಅಂಕಗಳಿಸಿ ಕಾಲೇಜಿಗೆ 3ನೇ ಸ್ಥಾನ ಪಡೆದಿದ್ದಾರೆ ಎಂದರು.

ಪ್ರಾಂಶುಪಾಲರಾದ ಆನಂದ್ ಮಾತನಾಡಿ, ಕೆ.ಎಸ್. ಈಶ್ವರಪ್ಪ ಮತ್ತು ಕೆ.ಈ.ಕಾಂತೇಶ್ ಆಡಳಿತಾತ್ಮಕವಾಗಿ ಸಂಪೂರ್ಣ ಸಹಕಾರ ನೀಡಿ, ಶೈಕ್ಷಣಿಕ ಮಾರ್ಗದರ್ಶನ, ಸಲಹೆ-ಸೂಚನೆ ನೀಡುತ್ತಾ ಬಂದಿದ್ದರಿಂದ ಮತ್ತು ಪೂರ್ಣ ಸ್ವಾತಂತ್ರ್ಯ ನೀಡಿದ್ದರಿಂದ ಕಾಲೇಜು ಯಶಸ್ವಿಯಾಗಿ ಉತ್ತಮ ಉಪನ್ಯಾಸಕರ ಸಹಕಾರದಿಂದ ಈ ಹಂತ ತಲುಪಲು ಸಾಧ್ಯವಾಗಿದೆ ಎಂದರು.

ಹೆಚ್ಚಿನ ಅಂಕಗಳಿಸಿದ ಮಹೀನ್ ಖಾನಮ್ ಅಫ್ರಿದಿ ಮಾತನಾಡಿ, ಕಾಲೇಜಿನಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಎಲ್ಲಾ ಉಪನ್ಯಾಸಕರ ಉತ್ತಮ ಮಾರ್ಗದರ್ಶನ ಸಲಹೆ ಮತ್ತು ನಮಗೆ ಯಾವುದೇ ಅನುಮಾನವಿದ್ದರೂ ವಿಶೇಷವಾಗಿ ಕರೆದು ಮಾರ್ಗದರ್ಶನ ನೀಡಿದ್ದರಿಂದ ನನಗೆ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದರು.

ಗೋಷ್ಠಿಯಲ್ಲಿ ಪ್ರೊ.ವಿಶ್ವನಾಥಯ್ಯ ಹಾಗೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಚ್ಚಮ್ಮ ದೇವಿಯ ವೈಭವದ ಮಹಾರಥೋತ್ಸವ
ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ವದ್ದು