ಪಿಯುಸಿ ಹಂತದ ಶಿಕ್ಷಣ ವಿದ್ಯಾರ್ಥಿಗಳಿಗೆ ಬಹುಮುಖ್ಯ

KannadaprabhaNewsNetwork | Published : Jun 17, 2025 11:53 PM

ಪಿಯುಸಿ ಹಂತದ ಶಿಕ್ಷಣವು ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಹಂತವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ತಾವು ಇಚ್ಛಿಸಿದ ವಿಷಯದಲ್ಲಿ ಸಾಧನೆ ತೋರುವುದು ಮುಖ್ಯ

ಭಟ್ಕಳ: ಪಟ್ಟಣದ ಆಸರಕೇರಿಯ ನಾಮಧಾರಿ ಸಭಾಭವನದಲ್ಲಿ ಶ್ರೀವೆಂಕಟೇಶ್ವರ ವಿದ್ಯಾವರ್ಧಕ ಸಂಘದ ೧೨ನೇ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪುಸ್ತಕ ವಿತರಣಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಂತ ವೈದ್ಯ ರವಿ ನಾಯ್ಕ ಉದ್ಘಾಟಿಸಿದರು.

ಪಿಯುಸಿ ಹಂತದ ಶಿಕ್ಷಣವು ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಹಂತವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ತಾವು ಇಚ್ಛಿಸಿದ ವಿಷಯದಲ್ಲಿ ಸಾಧನೆ ತೋರುವುದು ಮುಖ್ಯವಾಗಿವೆ, ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಹೊರ ತರಲು ಪ್ರಯತ್ನಿಸುವುದು ಬಹು ಮುಖ್ಯವಾಗಿರುತ್ತದೆ. ಮೊದಲ ಪ್ರಯತ್ನದಲ್ಲಿ ತನ್ನಿಂದ ಸಾಧಿಸಲು ಆಗದೇ ಇದ್ದಾಗ ನಾವು ಹತಾಶರಾಗುವುದನ್ನು ಬಿಟ್ಟು ಇನ್ನೊಮ್ಮೆ ಪ್ರಯತ್ನಿಸಿ ಜೀವನದಲ್ಲಿ ಸಾಧನೆ ಮಾಡಬೇಕು. ಅನೇಕ ಮೇಧಾವಿಗಳು ಮೊದಲ ಹಂತದಲ್ಲಿ ಸೋತು ಹತಾಶರಾಗದೇ ಮುಂದೆ ಸತತ ಪ್ರಯತ್ನ ಮಾಡಿ ಸಾಧನೆ ಮಾಡಿದ ಹಲವು ಉದಾಹರಣೆಗಳಿವೆ. ನಮಗೆ ಸಮಾಜ ಎನು ಮಾಡಿದೆ ಎನ್ನುವುದಕ್ಕಿಂತ ನಾವು ಸಮಾಜಕ್ಕಾಗಿ ಏನು ಮಾಡಿದ್ದೇವೆ ಎನ್ನುವುದು ಮುಖ್ಯವಾಗಿದೆ. ವೈದ್ಯರು ಹಾಗೂ ಇಂಜನೀಯರು ಆದರೆ ಮಾತ್ರ ಯಶಸ್ವಿ ಜೀವನ ಅಲ್ಲ, ಜೀವನದಲ್ಲಿ ಯಶಸ್ವಿಯಾಗುವುದು ಬಹುಮುಖ್ಯ ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಅರುಣ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ತಮ ಸಾಧನೆ ತೋರಿ ಸಮಾಜಕ್ಕೆ ಗೌರವ ತರುವಂತ ಕೆಲಸ ಮಾಡಬೇಕು ಎಂದರು.

ಸಾರದ ಹೊಳೆ ಹಳೆಕೋಟೆ ಹನುಮಂತ ದೇವಸ್ಥಾನದ ಅಧ್ಯಕ್ಷ ಆರ್.ಕೆ. ನಾಯ್ಕ, ಉದ್ಯಮಿ ವಿಠ್ಠಲ್ ನಾಯ್ಕ, ಹಡೀನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಂ.ಕೆ. ನಾಯ್ಕ, ಜಿಲ್ಲಾ ವಿಶ್ರಾಂತ ನ್ಯಾಯಾಧೀಶ ರವಿ ನಾಯ್ಕ, ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಕೆ.ಆರ್.ನಾಯ್ಕ ಮಾತನಾಡಿದರು. ಅಧ್ಯಕ್ಷತೆಯನ್ನು ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮನಮೋಹನ ನಾಯ್ಕ ವಹಿಸಿ ಮಾತನಾಡಿದರು.

ಸಿಂಚನ ಹಕ್ರೆ ಪ್ರಾರ್ಥನೆ ಹಾಡಿದರು. ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ತೋರಿದ ಮನೋಹರ ಮಂಜುನಾಥ ನಾಯ್ಕ,ಪುರವರ್ಗ ಹಾಗೂ ತೇಜಸ್ವಿನಿ ಹೆರಿಯಾ ನಾಯ್ಕ, ಹಡೀನ್ ಹಾಗೂ ಪಿಯುಸಿ ದ್ವಿತೀಯ ವರ್ಷ ಪರೀಕ್ಷೆಯಲ್ಲಿ ತಾಲೂಕಿನ ಪ್ರಥಮ ಹಾಗೂ ನೀಟ್ ಪರೀಕ್ಷೆಯಲ್ಲಿ ಸಾಧನೆ ತೋರಿದ ಸಂಜನಾ ನಾಯ್ಕ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಶಿಕ್ಷಕನಾರಾಯಣ ನಾಯ್ಕ ನಿರ್ವಹಿಸಿದರು. ಶ್ರೀಧರ ನಾಯ್ಕ ವಂದಿಸಿದರು.