ಬಳ್ಳಾರಿ: ನಗರದ ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ನ ಶ್ರೀ ವಾಸವಿ ವಿದ್ಯಾಶಾಲೆಯ ವಿದ್ಯಾರ್ಥಿಗಳು ಭಾರತವು ವಿಶ್ವಕಪ್ ಕ್ರಿಕೆಟ್ನ ಫೈನಲ್ ಪಂದ್ಯದಲ್ಲಿ ಗೆದ್ದು ಬರಲಿ ಎಂದು ಹಾರೈಸಿ, ಶಾಲೆಯ ಆವರಣದಲ್ಲಿ ಶ್ರೀ ವಾಸವಿ ಮಾತೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಮಾಡಿದರು.
ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ಪದಾಧಿಕಾರಿಗಳು ಮಾತನಾಡಿದರು. ಟ್ರಸ್ಟ್ನ ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಭಾರತ ವಿಶ್ವಕಪ್ ಗೆದ್ದು ಬರಲಿ ಎಂದು ನಗರದ ಸೂರ್ಯಕಲಾ ಟ್ರಸ್ಟ್ನ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಸಿ, ಭಾರತ ತಂಡಕ್ಕೆ ಶುಭ ಕೋರಲಾಯಿತು. ಚೆಕ್ ದೇ ಇಂಡಿಯಾ ಹಾಡಿಗೆ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು. ಕೊನೆಯಲ್ಲಿ ಭಾರತ ವಿಶ್ವಕಪ್ ಗೆದ್ದು ಬರಲಿ ಎಂದು ಮಕ್ಕಳು ಘೋಷಣೆಗಳನ್ನು ಕೂಗಿದರು.ನೇರ ಪ್ರಸಾರ ವೀಕ್ಷಣೆಗೆ ಪ್ರವೇಶ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಡಾ. ರಾಜ್ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದಲ್ಲಿ ಬಳ್ಳಾರಿ ಜಿಲ್ಲಾಡಳಿತವು ಎಲ್ಇಡಿ ಪರದೆ ವ್ಯವಸ್ಥೆ ಕಲ್ಪಿಸಿದೆ.
ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನ. 19ರಂದು ನಡೆಯಲಿದ್ದು, ಮ್ಯಾಚ್ನ ನೇರ ಪ್ರಸಾರವನ್ನು ಮಧ್ಯಾಹ್ನ 1.30ರಿಂದ ನಗರದ ಡಾ. ರಾಜ್ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದಲ್ಲಿ ಎಲ್ಇಡಿ ಪರದೆಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಪಂದ್ಯಾವಳಿಯನ್ನು ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.