ಪುನೀತ್‌ ರಾಜ್ ಕುಮಾರ್ ಒಬ್ಬ ಆದರ್ಶ ವ್ಯಕ್ತಿ: ರಮೇಶ್‌

KannadaprabhaNewsNetwork |  
Published : Oct 30, 2024, 12:34 AM IST
29ಕೆಎಂಎನ್‌ಡಿ-7ಮಂಡ್ಯದ ಮಹಾವೀರ ವೃತ್ತದ ಬಳಿಯ ಕಾಮಧೇನು ಕಂಫರ್ಟ್‌ ಮುಂಭಾಗ ಪುನೀತ್‌ ರಾಜ್‌ಕುಮಾರ್‌ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಬದುಕಿದ್ದಾಗ ಪುನೀತ್ ರಾಜ್‌ಕುಮಾರ್ ಮಾಡಿದ ಸಮಾಜಮುಖಿ ಕೆಲಸಗಳು ಯಾರಿಗೂ ಗೊತ್ತಾಗಲೇ ಇಲ್ಲ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗದಂತೆ ಅಪ್ಪು ನೋಡಿಕೊಂಡಿದ್ದರು. ಅವರು ಅಗಲಿದಾಗಲೇ ಪುನೀತ್ ರಾಜ್‌ಕುಮಾರ್ ಒಳ್ಳೆಯ ಕೆಲಸಗಳು ಬೆಳಕಿಗೆ ಬಂದಿದ್ದವು .

ಕನ್ನಡಪ್ರಭ ವಾರ್ತೆ ಮಂಡ್ಯ

ಪುನೀತ್‌ ರಾಜ್‌ಕುಮಾರ್‌ ಅವರದ್ದು ಆದರ್ಶ ವ್ಯಕ್ತಿತ್ವ. ನಟನಾಗಿ ಸದಭಿರುಚಿಯ ಚಿತ್ರಗಳನ್ನು ನೀಡುವುದರೊಂದಿಗೆ ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದರು ಎಂದು ಕಾಮಧೇನು ರಮೇಶ್ ಹೇಳಿದರು.

ನಗರದ ಮಹಾವೀರ ವೃತ್ತದ ಬಳಿಯ ಕಾಮಧೇನು ಕಂಫರ್ಟ್‌ ಮುಂಭಾಗ ಪುನೀತ್‌ ರಾಜ್‌ಕುಮಾರ್‌ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೃದಯವಂತ ವ್ಯಕ್ತಿಯಾಗಿದ್ದ ಪುನೀತ್ ರಾಜ್‌ಕುಮಾರ್‌ ಸಮಾಜಕ್ಕೆ ನೀಡಿದ ಕೊಡುಗೆ ಮಾದರಿಯಾದದ್ದು. ಪ್ರಚಾರವನ್ನು ಎಂದೂ ಬಯಸದೆ ನಿಸ್ವಾರ್ಥದಿಂದ ನೊಂದವರಿಗೆ ಸಹಾಯಹಸ್ತ ನೀಡುವುದರೊಂದಿಗೆ ಎಲ್ಲರ ಹೃದಯದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದಾರೆ ಎಂದು ತಿಳಿಸಿದರು.

ಕರವೇ ಜಿಲ್ಲಾಧ್ಯಕ್ಷ ಶಂಕರೇಗೌಡ ಮಾತನಾಡಿ, ಬದುಕಿದ್ದಾಗ ಪುನೀತ್ ರಾಜ್‌ಕುಮಾರ್ ಮಾಡಿದ ಸಮಾಜಮುಖಿ ಕೆಲಸಗಳು ಯಾರಿಗೂ ಗೊತ್ತಾಗಲೇ ಇಲ್ಲ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗದಂತೆ ಅಪ್ಪು ನೋಡಿಕೊಂಡಿದ್ದರು. ಅವರು ಅಗಲಿದಾಗಲೇ ಪುನೀತ್ ರಾಜ್‌ಕುಮಾರ್ ಒಳ್ಳೆಯ ಕೆಲಸಗಳು ಬೆಳಕಿಗೆ ಬಂದಿದ್ದವು ಎಂದರು.

ಭಾರತೀಯ ಚಿತ್ರರಂಗದ ನಟಸಾರ್ವಭೌಮ ಡಾ. ರಾಜ್​ಕುಮಾರ್ ಆದರ್ಶದ ಹಾದಿಯಲ್ಲಿ ಹೆಜ್ಜೆ ಹಾಕಿದ ಪುನೀತ್ ರಾಜ್‍ಕುಮಾರ್ ಅಗಲಿ ಮೂರು ವರ್ಷಗಳಾದವು ಅನ್ನೋದನ್ನು ಕೋಟ್ಯಂತರ ಅಭಿಮಾನಿಗಳಲ್ಲದೇ ಅವರ ಕುಟುಂಬ ವರ್ಗ ಕೂಡ ಅರಗಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಸ್ಮರಿಸಿದರು.

ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ, ಪುಷ್ಪನಮನ ಸಲ್ಲಿಸಿದ ಬಳಿಕ ಪುನೀತ್‌ ಅವರ ನೆಚ್ಚಿನ ಸಿಹಿ ತಿನಿಸುಗಳನ್ನು ಎಡೆಇಟ್ಟರು. ನಂತರ ನೆರೆದಿದ್ದ ನೂರಾರು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದರು.

ನಟರಾಜು, ರವಿ, ಬೋರೇಗೌಡ, ಚಂದ್ರು, ನಾರಾಯಣ್, ಮಹೇಶ್, ಅಭಿಷೇಕ್, ಅಶೋಕ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!