ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಜಿಲ್ಲಾಧಿಕಾರಿ ಜಾನಕಿ

KannadaprabhaNewsNetwork |  
Published : Jan 31, 2025, 12:45 AM IST
(ಫೋಟೋ 30ಬಿಕೆಟಿ1, ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷೆ ಜಾನಕಿ ಕೆ.ಎಂ) | Kannada Prabha

ಸಾರಾಂಶ

ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಲ್‌ಗೆ ₹5,650 ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಠ ಪ್ರತಿ ರೈತರಿಂದ 20 ಕ್ವಿಂಟಲ್ ಕಡಲೆ ಉತ್ಪನ್ನ ಖರೀದಿ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಲ್‌ಗೆ ₹5,650 ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಠ ಪ್ರತಿ ರೈತರಿಂದ 20 ಕ್ವಿಂಟಲ್ ಕಡಲೆ ಉತ್ಪನ್ನ ಖರೀದಿಸಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕಫೋರ್ಸ್‌ ಸಮಿತಿ ಅಧ್ಯಕ್ಷರಾದ ಜಾನಕಿ ಕೆ.ಎಂ ಹೇಳಿದ್ದಾರೆ.

ರೈತರ ನೋಂದಣಿ ಕಾರ್ಯವನ್ನು 80 ದಿನಗಳವರೆಗೆ ಮತ್ತು ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರ ಹೆಸರು ನೋಂದಾಯಿಸಿಕೊಳ್ಳಲು ಆಧಾರ್‌ ಕಾರ್ಡ್‌ ಪ್ರತಿ, ಎಫ್ಐಡಿ ಸಂಖ್ಯೆ ಹಾಗೂ ಪಹಣಿ ಸಲ್ಲಿಸಿ ನೋಂದಾಯಿಸಿಕೊಳ್ಳತಕ್ಕದ್ದು. ಕಡಲೆ ಉತ್ಪನ್ನ ಖರೀದಿಸುವ ಪೂರ್ವದಲ್ಲಿ ರೈತರು ನೀಡಿರುವ ವಿವರವನ್ನು ಎನ್‌ಸಿಸಿಎಫ್ ಸಂಸ್ಥೆಯು ಅಭಿವೃದ್ಧಿ ಪಡಿಸಿರುವ ಇ-ಸಂಯುಕ್ತಿ ತಂತ್ರಾಂಶದೊಂದಿಗೆ ಭೂಮಿ ಯುಡಿಐಡಿಎಐ ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ಪರಿಶೀಲಿಸಿ ನಂತರವೆ ನೋಂದಾಯಿಸಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದು ವೇಳೆ ಬೆಳೆ ದರ್ಶಕದಲ್ಲಿ ಬೆಳೆ ಬೆಳೆಯದೆ ಇರುವುದು ಕಂಡು ಬಂದಲ್ಲಿ ಅಂತಹ ರೈತರು ಹತ್ತಿರದ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಸಂಪರ್ಕಿಸಿ ಆಕ್ಷೇಪಣೆ ಸಲ್ಲಿಸಿ ಬೆಳೆ ದರ್ಶಕದಲ್ಲಿ ಬೆಳೆ ನಮೂದಿಸಿಕೊಂಡ ನಂತರ ಖರೀದಿ ಕೇಂದ್ರದಲ್ಲಿ ನೋಂದಾಯಿಸಕೊಳ್ಳತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಖರೀದಿ ಕೇಂದ್ರಗಳ ಅಧಿಕಾರಿಗಳನ್ನು ಹಾಗೂ ಶಾಖಾ ವ್ಯವಸ್ಥಾಪಕರನ್ನು (9449864458) ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಖರೀದಿ ಕೇಂದ್ರಗಳ ವಿವರ:

ಬಾಗಲಕೋಟೆ ಬೆನಕಟ್ಟಿ: 9741066862

ಹಳ್ಳೂರು: 9901325201

ಬಾದಾಮಿ: 9611358837, 9008116746

ಕೆರೂರು: 9972301729

ಹುನಗುಂದ, ಇಳಕಲ್ಲ: 9480262655

ನಂದವಾಡಗಿ: 9902377067

ಹಿರೇಅದಾಪೂರ: 8497876996

ಬೂದಿಹಾಳ: 7019825319

ಸುಳೇಬಾವಿ: 9449762433, 9008215922

ಮುಗನೂರು: 8310324070

ಕೂಡಲಸಂಗಮ: 9449357061

ಮುಧೋಳ: 9242783318

ಲೋಕಾಪೂರ: 9880927310

ಸರ್ವಬಂದು: 9844474344

ಜಮಖಂಡಿ: 7019445935

ತೊದಲಬಾಗಿ: 9741998771

ಬೀಳಗಿ: 7019682890

ಬೀಳಗಿ ಕ್ರಾಸ್: 9880376768

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್ಸಲ್ಲಿ ಲಗೇಜ್‌ ದರ ಹೆಚ್ಚಳ
ಆರೆಸ್ಸೆಸ್ಸನ್ನು ದೆವ್ವಕ್ಕೆ ಹೋಲಿಸಿದ ಪ್ರಿಯಾಂಕ್‌