ಕನ್ನಡಪ್ರಭ ವಾರ್ತೆ ಹೊಸಕೋಟೆ
ನಗರದ ಹೊರವಲಯದ ಚೀಮಸಂದ್ರದಲ್ಲಿ ಕೆನರಾ ಬ್ಯಾಂಕ್ ಸಹಯೋಗದಿಂದ ೭೬ನೇ ಅಕ್ಷಯಪಾತ್ರೆ ಅಡುಗೆ ಮನೆಯನ್ನು ಉದ್ಘಾಟಿಸಿ ಮಾತನಾಡಿದರು.
24 ವರ್ಷಗಳ ಹಿಂದೆ ಅಕ್ಷಯ ಪಾತ್ರೆ ಫೌಂಡೇಷನ್ ಸ್ಥಾಪನೆ ಮಾಡಿದ ಸಂದರ್ಭದಲ್ಲಿ ಕೇವಲ 1500 ಮಕ್ಕಳಿಗೆ ಊಟ ಸರಬರಾಜು ಮಾಡುತ್ತಿದ್ದೆವು. ಪ್ರಸ್ತುತ 3 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುತ್ತಿದ್ದು, ಚೀಮಸಂದ್ರದಲ್ಲಿ ಆರಂಭವಾಗಿರುವ ಈ ಹೊಸ ಅಡುಗೆ ಮನೆಯು ಸುಮಾರು 7500 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಒದಗಿಸುವ ಸೌಲಭ್ಯ ಹೊಂದಿದೆ. ಹೆಚ್ಚು ಮಕ್ಕಳಿಗೆ ಊಟ ಸಿದ್ಧಪಡಿಸಿದ ನಂತರ ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಪ್ರಮುಖ ಸ್ಥಳದಲ್ಲಿ ಸ್ಥಾಪಿಸಲಾಗಿದೆ ಎಂದು ಹೇಳಿದರು.ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಮಾತನಾಡಿ, ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಊಟವನ್ನು ಒದಗಿಸುವ ಅಕ್ಷಯ ಪಾತ್ರೆದ ಬದ್ಧತೆಗೆ ಈ ಹೊಸ ಅಡುಗೆಮನೆ ಸಾಕ್ಷಿಯಾಗಿದೆ. ಅಕ್ಷಯ ಪಾತ್ರೆಯ ಸಾಮಾಜಿಕ ಬದ್ಧತೆಯ ಕಾರ್ಯಕ್ಕೆ ಸರ್ಕಾರಗಳ ಸಹಕಾರ ಕೂಡ ಪರಿಣಾಮಕಾರಿಯಾಗಿ ಧಕ್ಕುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಲತಾಕುಮಾರಿ, ಅಕ್ಷಯ ಪಾತ್ರೆ ಫೌಂಡೇಷನ್ನ ಬೆಂಗಳೂರು ಕ್ಲಸ್ಟರ್ನ ಪ್ರಾದೇಶಿಕ ಅಧ್ಯಕ್ಷ ಗುಣಕರ ರಾಮ ದಾಸ ಕೆನರಾ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯನಾರಾಯಣ ರಾಜು ಕೆ. ಹಾಜರಿದ್ದರು.