ಕನ್ನಡಪ್ರಭ ವಾರ್ತೆ ಮಂಡ್ಯ
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮಂಡ್ಯ ತಾಲೂಕಿನ ಕಾಳಪ್ಪ ಬಡಾವಣೆಯ ಕೊಳಚೆ ಪ್ರದೇಶದ ಜನರಿಗೆ ನಿವೇಶನ ನೀಡಲು ನಗರದಲ್ಲಿ ಯಾವುದೇ ಖಾಲಿ ನಿವೇಶನ ಇಲ್ಲ. ಆದ್ದರಿಂದ ನಗರದ ಸುತ್ತಲಿನ ೧೦ ಕಿ.ಮೀ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳ ಗುರುತಿಸುವಂತೆ ತಿಳಿಸಿದರು.
ನಿವೇಶನ ನೀಡುವ ಸ್ಥಳಗಳಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಕಾನೂನಿನ ಸಮಸ್ಯೆ ಉಂಟಾಗಬಾರದು. ಸುಮಾರು ೯ ಎಕರೆ ಜಾಗ ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ತಾಲೂಕಿನ ಮಹದೇವಪುರದ ಸ್ಲಮ್ ಜಾಗದಲ್ಲಿ ವಾಸವಾಗಿರುವ ೪೫ ಜನರಿಗೆ ನಿವೇಶನ ನೀಡಲು ಸರ್ಕಾರದಿಂದ ಅನುಮತಿ ದೊರೆತಿದೆ. ಆದರೆ ಕೆಲ ಫಲಾನುಭವಿಗಳ ದಾಖಲಾತಿ ಕೊರತೆಯಿಂದ ೩೪ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ. ಉಳಿದ ೧೧ ಜನ ಸೂಕ್ತ ದಾಖಲೆಗಳನ್ನು ನೀಡಿದರೆ ನಿವೇಶನ ಹಂಚಿಕೆ ಮಾಡಬಹುದು ಎಂದು ಹೇಳಿದರು.
ಕಾರ್ಮಿಕ ಇಲಾಖೆಯಿಂದ ನಕಲಿ ಕಾರ್ಮಿಕ ಗುರುತಿನ ಚೀಟಿ ಪಡೆದು ನಿಜವಾದ ಕಾರ್ಮಿಕರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ನಕಲಿ ಕಾರ್ಮಿಕ ಕಾರ್ಡ್ಅನ್ನು ಹೊಂದಿರುವವರು ಪಡೆಯುತ್ತಿದ್ದಾರೆ. ಸರ್ಕಾರಿ ಸೌಲಭ್ಯ ನೀಡಬೇಕಾದರೆ ಕಾರ್ಮಿಕರು ಕೆಲಸ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೌಲಭ್ಯ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮುಡಾ ಆಯುಕ್ತ ಕೃಷ್ಣಕುಮಾರ್, ನಗರಾಭಿವೃದ್ಧಿ ಕೋಶಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ತಹಸೀಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಸ್ಲಮ್ ಬೋರ್ಡ್ ಅಧಿಕಾರಿಗಳು, ಮುಖಂಡರು ಸೇರಿದಂತೆ ಇತರರಿದ್ದರು.