ಕೋಲಾರ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳಿಗೆ ಕಡಿವಾಣ ಹಾಕಿ

KannadaprabhaNewsNetwork |  
Published : Jun 25, 2026, 01:15 AM IST
೨೪ಕೆಎಲ್‌ಆರ್-೪ಕೋಲಾರದ ತಾಲೂಕು ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ.ನಂಬರ್ ದುರಸ್ಥಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತಸಂಘದಿಂದ ನೂತನ ತಹಸೀಲ್ದಾರ್ ಶ್ರೀನಿವಾಸ್‌ರಿಗೆ ಮನವಿಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಕೋಲಾರ ತಾಲೂಕು ಕಚೇರಿಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ. ನಂಬರ್ ದುರಸ್ತಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಮುಂಗಾರು ಮಳೆಯಿಂದ ಬಡವರ ಬದುಕು ರೈತರ ಬೆಳೆ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ನೂತನ ತಹಸೀಲ್ದಾರ್ ಶ್ರೀನಿವಾಸ್‌ ಅವರಿಗೆ ಗಿಡ ನೀಡಿ ಸ್ವಾಗತಿಸಿ ನಂತರ ಮನವಿ ನೀಡಿ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಕೋಲಾರ

ತಾಲೂಕು ಕಚೇರಿಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ. ನಂಬರ್ ದುರಸ್ತಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಮುಂಗಾರು ಮಳೆಯಿಂದ ಬಡವರ ಬದುಕು ರೈತರ ಬೆಳೆ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ನೂತನ ತಹಸೀಲ್ದಾರ್ ಶ್ರೀನಿವಾಸ್‌ ಅವರಿಗೆ ಗಿಡ ನೀಡಿ ಸ್ವಾಗತಿಸಿ ನಂತರ ಮನವಿ ನೀಡಿ ಒತ್ತಾಯಿಸಿದರು.

ಹಿರಿಯ ಅಧಿಕಾರಿಗಳ ವಾಸಸ್ಥಾನಕ್ಕೆ ಕೂಗಳತೆ ದೂರದಲ್ಲಿರುವ ತಾಲೂಕು ಕಚೇರಿಯಲ್ಲಿ ರೈತರ ಶೋಷಣೆ ಮಾಡುವ ದಲ್ಲಾಳಿಗಳ ಹಾವಳಿಗೆ ಕಡಿವಾಣವಿಲ್ಲದಂತಾಗಿದೆ. ಭೂಪರಿವರ್ತನೆಗೆ ೩ ಲಕ್ಷ, ಪಿ.ನಂಬರ್ ದುರಸ್ತಿ ಮಾಡಲು ೪ ಲಕ್ಷ ನಿಗದಿ ಮಾಡಲು ಅಧಿಕಾರಿಗಳು ದಲ್ಲಾಳಿಗಳನ್ನು ನೇಮಕ ಮಾಡಿಕೊಂಡಿದ್ದಾರೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳಿಂದ ತಾಲೂಕು ಕಚೇರಿಗೆ ಬರುವ ರೈತರೆ ಶೌಚಾಲಯಕ್ಕೆ ಹೋಗಲು ಜೊತೆಯಲ್ಲಿ ಚಂಬುಗಳಲ್ಲಿ ನೀರು ತನ್ನಿ ಎಂದು ನಾಮಫಲಕ ಅಳವಡಿಸಿ ಎಂದು ತಹಸೀಲ್ದಾರ್‌ರಿಗೆ ಸಲಹೆ ನೀಡಿದರು.

ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಮಳೆ ನೀರು ಸರಾಗವಾಗಿ ಹರಿಯಲು ರಾಜಕಾಲುವೆ, ಚರಂಡಿಗಳ ಅಭಿವೃದ್ಧಿಯಿಲ್ಲದೆ ಒತ್ತುವರಿ ಆಗಿರುವುದರಿಂದ ಮಳೆ ನೀರು ಲಕ್ಷಾಂತರ ರು. ಬಂಡವಾಳ ಹಾಕಿ ಬೆಳೆದಿರುವ ರೈತರ ಕೃಷಿ ಜಮೀನಿಗೆ ನುಗ್ಗಿ ಬೆಳೆ ನಾಶವಾದರೆ ಮತ್ತೊಂದು ಕಡೆ ಬಡವರ ಮನೆಗೆ ನೀರು ನುಗ್ಗಿ ಬಡವರ ಬದುಕನ್ನೇ ಬೀದಿಗೆ ತಳ್ಳುತ್ತಿದ್ದರೂ ಸಮಸ್ಯೆ ಕಂದಾಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಒತ್ತುವರಿದಾರರ ಪರ ನಿಂತು ಬಡವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ನೇರವಾಗಿ ರೈತರ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿಗಳಿಗೆ ಇಚ್ಛಾಶಕ್ತಿ ಕೊರತೆ ಜೊತೆಗೆ ಕನಿಷ್ಠ ಪಕ್ಷ ಅವರ ಸಮಸ್ಯೆಗಳನ್ನು ತಿಂಗಳಾನುಗಟ್ಟಲೇ ಅಲೆದಾಡಿದರೂ ಸಮಸ್ಯೆಗೆ ಮುಕ್ತಿ ಸಿಗುವುದಿಲ್ಲ. ಬ್ಯಾಗಿನಲ್ಲಿ ಕಡತ, ಕೈಯಲ್ಲಿ ಕಾಸು ಇದ್ದರೆ ೨೪ ಗಂಟೆಯಲ್ಲಿ ಕೆಲಸವಾಗುವ ಮಟ್ಟಕ್ಕೆ ಇಲಾಖೆ ಹದಗೆಟ್ಟಿದೆ ಎಂದು ಆರೋಪಿಸಿದರು.

ಕಚೇರಿಗೆ ಬರುವ ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರಿಗೆ ಕನಿಷ್ಠ ಪಕ್ಷ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯಿಲ್ಲ. ಇರುವ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿವೆ. ದೂರದ ಊರುಗಳಿಂದ ಬರುವ ಬಡವರು ಕುಳಿತುಕೊಳ್ಳಲು ಕುರ್ಚಿಗಳಿಲ್ಲ. ಸಮಸ್ಯೆಯನ್ನು ಕೇಳಲು ಹಿರಿಯ ಅಧಿಕಾರಿಗಳು ಕೈಗೆ ಸಿಗುವುದಿಲ್ಲ. ಇದ್ದರೂ ರಿಯಲ್ ಎಸ್ಟೇಟ್ ಉದ್ಯಮಿಗಳು ಗಂಟೆಗಟ್ಟಲೇ ಕಚೇರಿಯಲ್ಲಿ ಕುಳಿತು ಕಷ್ಟಸುಖಗಳನ್ನು ಮಾತನಾಡಿಕೊಳ್ಳುವ ಮಟ್ಟಕ್ಕೆ ಇಲಾಖೆ ಹದಗೆಟ್ಟಿದೆ ಎಂದು ದೂರಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಶ್ರೀನಿವಾಸ್, ಸರ್ವೇಯರ್‌ಗಳ ಸಮಸ್ಯೆ ಇರುವುದರಿಂದ ಒತ್ತುವರಿ ಆಗಿರುವ ಬಂಡಿದಾರಿ, ಸ್ಮಶಾನ ಮತ್ತಿತರ ಸರ್ಕಾರಿ ಆಸ್ತಿಗಳ ಒತ್ತುವರಿ ತೆರೆವುಗೊಳಿಸಲು ವಿಳಂಬವಾಗುತ್ತಿದೆ. ಜೊತೆಗೆ ಪಿ. ನಂಬರ್ ದುರಸ್ತಿ ಹಾಗೂ ಭೂ ಪರಿವರ್ತನೆಗೆ ಲಕ್ಷ ಲಕ್ಷ ಲಂಚ ಪಡೆಯುವ ಬಗ್ಗೆ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳುವ ಮತ್ತು ಕಚೇರಿಗೆ ಮೂಲ ಸೌಕರ್ಯಗಳ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮಣ್ಣ ತೆನ್ನಹಳ್ಳಿ, ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ಪುತ್ತೇರಿ ರಾಜು, ನಾಗರಾಜ್, ಗೀರೀಶ್, ರಾಜೇಶ ಪಾರುಕ್‌ಪಾಷ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಬಿ.ಸುರೇಶ ಗೌಡ ವಿರುದ್ಧ ಮಾನ ಹಾನಿಕರ ಪೋಸ್ಟ್‌
ಪ್ರೌಢಶಾಲೆಗೆ ಪಿಯು ಉಪನ್ಯಾಸಕರ ನಿಯೋಜನೆಗೆ ತೀವ್ರ ವಿರೋಧ