ನ್ನಡಪ್ರಭ ವಾರ್ತೆ ಮುಳಬಾಗಿಲು
ತಾಲೂಕಾಧ್ಯಕ್ಷ ಯಲುವಳ್ಳಿ ಪ್ರಭಾಕರ್ ಮಾತನಾಡಿ, ಪಂಚಾಯಿತಿಯಲ್ಲಿ ಬಡವರಿಗೆ ತಲುಪಬೇಕಾದ ನಿವೇಶನಗಳು ಇಂದು ಬಲಾಢ್ಯರ ಪಾಲಾಗುತ್ತಿವೆ. ಅಧಿಕಾರಿಗಳ ವೈಫಲ್ಯತೆಗೆ ಬಡವರು ಬಲಿಯಾಗುತ್ತಿದ್ದಾರೆ. ತಾಲೂಕಿನಾದ್ಯಂತ ಅಕ್ರಮ ಲೇಔಟ್ಗಳನ್ನು ಸೃಷ್ಟಿಸಿ, ಬಡವರಿಗೆ ಕಡಿಮೆ ಬೆಲೆಯಲ್ಲಿ ನಿವೇಶನ ನೀಡುತ್ತೇವೆಂದು ವಂಚನೆ ಮಾಡುವ ದೊಡ್ಡ ದಂಧೆಯೇ ನಡೆಯುತ್ತಿದೆ. ಅದಕ್ಕೆ ಬೆಂಗಾವಲಾಗಿ ಅಧಿಕಾರಿಗಳು ನಿಂತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ನರೇಗಾ ಕಾಮಗಾರಿಗಳಲ್ಲಿ ಜೆಸಿಬಿಗಳ ಅಬ್ಬರ, ಜಾಬ್ ಕಾರ್ಡ್ಗಳ ದುರ್ಬಳಕೆ ಹೆಚ್ಚಾಗಿದೆ. ನರೇಗಾ ಯೋಜನೆಯು ಇಂದು ಅಧಿಕಾರಿಗಳ ಮತ್ತು ಗುತ್ತಿಗೆದಾರರಿಗೆ ಚಿನ್ನದ ಮೊಟ್ಟೆ ಇಡುವ ಕಾಮಗಾರಿಯಾಗಿ ಮಾರ್ಪಟ್ಟಿದೆ. ಗ್ರಾಮೀಣ ಪ್ರದೇಶದ ಬಡ, ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ನೆಪದಲ್ಲಿ ಜಾಬ್ಕಾರ್ಡ್ಗಳನ್ನು ಪಡೆದು ಕಾಮಗಾರಿಗಳನ್ನು ಜೆಸಿಬಿಗಳಲ್ಲಿ ಮಾಡುವ ಮೂಲಕ ಲಕ್ಷ ಲಕ್ಷ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ವರ್ಷಕ್ಕೊಮ್ಮೆ ಪಂಚಾಯ್ತಿ ಸಿಬ್ಬಂದಿಯನ್ನು ಬದಲಾಯಿಸಿ:
ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವ ಗ್ರಾಮಸಭೆಗಳು ಇಂದು ಕೇವಲ ಛಾಯಾಚಿತ್ರಗಳಿಗೆ ಸೀಮಿತವಾಗಿವೆ ಎಂದು ತಿಳಿಸಿ, ಹಳ್ಳಿಗಳ ಚರಂಡಿ, ವಿದ್ಯುತ್ ದೀಪ, ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಯಾಗುವ ೧೪- ೧೫ ನೇ ಹಣಕಾಸು ಯೋಜನೆಯ ದುರ್ಬಳಕೆಯನ್ನು ತನಿಖೆ ಮಾಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಇಒ ಸರ್ವೇಶ್, ನರೇಗಾ ಕಾಮಗಾರಿ ಯಂತ್ರೋಪಕರಣಗಳಲ್ಲಿ ಮಾಡುತ್ತಿರುವ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಲೇಔಟ್ಗಳ ದಾಖಲೆಗಳನ್ನು ಪರೀಶೀಲನೆ ಮಾಡುವವರೆಗೂ ಯಾವುದೇ ಕಾರಣಕ್ಕೂ ಖಾತೆಗಳಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡುವ ಭರವಸೆ ನೀಡಿದರು.