ಕನ್ನಡಪ್ರಭ ವಾರ್ತೆ ಮಂಡ್ಯ
ಬೆಂಗಳೂರಿನ ವಿಕಾಸಸೌಧ ಸಭಾಂಗಣದಲ್ಲಿ ಪು.ತಿ.ನ ಹಾಗೂ ಕೆ.ಎಸ್.ನ ಟ್ರಸ್ಟ್ಗಳ ಅಧ್ಯಕ್ಷರು, ಸದಸ್ಯರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನಿಸಿದ ಇಬ್ಬರೂ ಸಾಹಿತಿಗಳು ಇಡೀ ನಾಡಿನ ಹೆಮ್ಮೆಯಾಗಿದ್ದಾರೆ. ಅವರ ಸಾಹಿತ್ಯ ಕೃತಿಗಳು ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯವಾಗಿವೆ. ಇವರಿಬ್ಬರ ಸ್ಮರಣಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಾರಂಭಿಸಿರುವ ಟ್ರಸ್ಟ್ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.ಮೇಲುಕೋಟೆಯಲ್ಲಿರುವ ಪು.ತಿ.ನ ಅವರ ಮನೆಯನ್ನು ಈಗಾಗಲೇ ನವೀಕರಣಗೊಳಿಸಲಾಗಿದೆ. ಸಮಾಧಿ ಸ್ಥಳ ಅಭಿವೃದ್ಧಿ ಮಾಡಲು ಬಹಳ ದಿನಗಳಿಂದ ಬೇಡಿಕೆಯಿದೆ. ಬಯಲು ರಂಗಮಂದಿರಕ್ಕೆ ಮೇಲ್ಛಾವಣಿ ಹಾಕಿಸುವ ಕಾರ್ಯ ಮತ್ತು ಅವರ ಸಾಹಿತ್ಯಗಳ ಮರುಮುದ್ರಣ ಹಾಗೂ ಜನಪ್ರಿಯಗೊಳಿಸುವ ಪ್ರಯತ್ನಗಳಿಗೆ ಅಗತ್ಯ ನೆರವನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಮಾಡಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ನಮ್ಮ ಮನವಿಗೆ ಸ್ಪಂದಿಸಿದ್ದು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಎರಡೂ ಟ್ರಸ್ಟ್ಗಳಿಗೆ ಹೊಸ ಸ್ವರೂಪ ನೀಡಲಾಗುವುದೆಂದು ಎಂದು ತಿಳಿಸಿದರು.
ಪು.ತಿ.ನ ಟ್ರಸ್ಟ್ ಅಧ್ಯಕ್ಷ ಪ್ರೊ.ಕೃಷ್ಣೇಗೌಡ, ಕೆ.ಎಸ್.ನ ಟ್ರಸ್ಟ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಭಾಗವಹಿಸಿದ್ದರು.