ಆಲೂರಲ್ಲಿ ಸೆಟ್ಟೇರಿದ ಕಾದಂಬರಿ ಆಧಾರಿತ ‘ಪುಟ್ಟಗೂಡಿನ ಪುಟ್ಟದರಸಿ’ ಮಕ್ಕಳ ಚಿತ್ರ

KannadaprabhaNewsNetwork |  
Published : May 08, 2024, 01:05 AM IST
ಪುಟ್ಟಗೂಡಿನ ಪಟ್ಟದರಸಿ” ಮಕ್ಕಳ ಚಲನಚಿತ್ರಮರಾ ಗುಂಡಿ ಒತ್ತುವ ಮೂಲಕ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಜೆ. ಕೃಷ್ಣೇಗೌಡ ಮಾತನಾಡಿದರು | Kannada Prabha

ಸಾರಾಂಶ

ಬೆಂಗಳೂರಿನ ಕಲಾಸಿಪಾಳ್ಯದ ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರ ಸೋಮವಾರ ಆಲೂರು ತಾಲೂಕಿನ ತಾಳೂರಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿಸಿ ಚಿತ್ರೀಕರಣ ಪ್ರಾರಂಭಿಸಿದೆ.

ಚಿತ್ರೀಕರಣ ಆರಂಭ । ಸಾಹಿತಿ, ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್ ವಿರಚಿತ ಕಾದಂಬರಿ । ಆಂಜನೇಯನಿಗೆ ಪೂಜೆಗೈದು ಮುಹೂರ್ತ

ಕನ್ನಡಪ್ರಭ ವಾರ್ತೆ ಆಲೂರು

ಬೆಂಗಳೂರಿನ ಕಲಾಸಿಪಾಳ್ಯದ ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರ ಸೋಮವಾರ ತಾಲೂಕಿನ ತಾಳೂರಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿಸಿ ಚಿತ್ರೀಕರಣ ಪ್ರಾರಂಭಿಸಿದೆ.

ಚಿತ್ರಕ್ಕೆ ಕ್ಯಾಮೆರಾ ಗುಂಡಿ ಒತ್ತುವ ಮೂಲಕ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣೇಗೌಡ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಓರ್ವ ಬಡ ಹಾಗೂ ತಬ್ಬಲಿ ವಿದ್ಯಾರ್ಥಿನಿಯ ಸಾಧನೆ ಕುರಿತು ಚಲನಚಿತ್ರ ಮೂಡಿ ಬರುತ್ತಿದ್ದು ಪ್ರತಿ ವಿದ್ಯಾರ್ಥಿಗೆ ತನ್ನ ಭವಿಷ್ಯ ಕುರಿತು ಮಾರ್ಗದರ್ಶನ ನೀಡುವ ಚಿತ್ರವಾಗಿದೆ. ವಿಶೇಷವಾಗಿ ಕೊಟ್ರೇಶ್ ಎಸ್. ಉಪ್ಪಾರ್ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ತಾಳೂರು ಗ್ರಾಮದಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭವಾಗಿದ್ದು, ಒಬ್ಬ ವಿದ್ಯಾರ್ಥಿನಿ ಕುರಿತು ಚಲನಚಿತ್ರ ಮೂಡಿ ಬರುತ್ತಿರುವುದು ಹರ್ಷದಾಯಕ ಎಂದು ಹೇಳಿದರು.

ಮಹಾಲಕ್ಷ್ಮಿ ಥಿಯೇಟರ್ಸ್‌ ಮಾಲೀಕ ಹಾಗೂ ನಿರ್ಮಾಪಕ ಲಕ್ಷ್ಮಿಕುಮಾರ್ ಮಾತನಾಡಿ, ಮಕ್ಕಳಿಗೆ ಸಂಬಂಧಪಟ್ಟ ಕಾದಂಬರಿ ಇದಾಗಿದ್ದ ಕಾರಣ ಮಕ್ಕಳ ಸಿನಿಮಾ ಮಾಡಲು ಸೂಕ್ತ ಕಥಾವಸ್ತು ಎಂದು ಈ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದಾಗಿದ್ದೇನೆ ಎಂದು ತಿಳಿಸಿದರು.

ಯುವ ನಿರ್ದೇಶಕ ಅರುಣ್‌ಕುಮಾರ್ ಕರಡಿಗಾಲ ಮಾತನಾಡಿ, ಕೊಟ್ರೇಶ್ ಎಸ್. ಉಪ್ಪಾರವರ ‘ಪುಟ್ಟಗೂಡಿನ ಪಟ್ಟದರಸಿ’ ಕಾದಂಬರಿಯನ್ನು ಆಧರಿಸಿ ಈ ಮಕ್ಕಳ ಚಿತ್ರವನ್ನು ಲಕ್ಷ್ಮಿ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ಸ್ಥಳೀಯ ಕಲಾವಿದರನ್ನು ಬಳಸಿಕೊಳ್ಳುವ ಮೂಲಕ ಆಲೂರು ಹಾಗೂ ಬೇಲೂರಿನ ಸುತ್ತಮುತ್ತ ೩೦ ದಿನಗಳ ಕಾಲ ಮೊದಲನೇ ಹಂತದ ಚಿತ್ರೀಕರಣವನ್ನು ಚಿತ್ರ ತಂಡ ಮಾಡಲಿದೆ ಎಂದರು.

ಚಿತ್ರಕ್ಕೆ ಸಂಭಾಷಣೆಯನ್ನು ವಿಜಯ ಹಾಸನ್ ಬರೆದಿದ್ದು, ಛಾಯಾಗ್ರಹಣ ಚಂದು, ಸಂಕಲನ ಸ್ಟಾನಿ, ಸಹನಿರ್ದೇಶನ ಶರತ್ ಬಾಬು, ಅನಿಲ್ ಕುಮಾರ್ ಮಾಡುತ್ತಿದ್ದು ಮೊದಲ ಬಾರಿಗೆ ಅರುಣ್ ಕುಮಾರ್ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ತಾರಾಗಣದಲ್ಲಿ ಸಿದ್ದು ಮಂಡ್ಯ, ಪೂಜಾ ರಘುನಂದನ್, ಕುಮಾರಿ ಶರಣ್ಯ, ಮುರುಳಿ ಹಾಸನ್, ಗ್ಯಾರಂಟಿ ರಾಮಣ್ಣ, ಎಚ್.ಎಸ್.ಪ್ರಭಾಕರ್, ಅಂಬಿಕಾ, ತಾಳೂರು ಧರ್ಮ, ವಿದ್ಯಾರ್ಥಿಗಳಾದ ಸ್ಫೂರ್ತಿ, ದೀಪಿಕಾ, ಸಿಂಚನ, ಶ್ರೇಯಸ್, ಹೇಮಲತಾ, ವೀಣಾ, ಲಕ್ಷ್ಮಿ ಸೇರಿದಂತೆ ಸುಮಾರು ಮೂವತ್ತಕ್ಕೂ ಹೆಚ್ಚು ಕಲಾವಿದರು ಇದ್ದಾರೆ ಎಂದು ಮಾಹಿತಿ ನೀಡಿದರು.

ದೇವಸ್ಥಾನದ ಟ್ರಸ್ಟಿ, ಗೌರವಾಧ್ಯಕ್ಷ ಚಿಕ್ಕೇಗೌಡ, ಊರಿನ ಮುಖಂಡರಾದ ಮೋಹನ್ ಕುಮಾರ್, ಧರ್ಮ ಟಿ.ಇ., ಜಿ.ಕೆ.ವೆಂಕಟೇಶ್, ಲಾಯರ್ ಮಂಜುನಾಥ್, ಗ್ರಾ.ಸ. ಹರೀಶ, ಮೋಹನ, ದಿನೇಶ, ಪುನೀತ, ಲೋಹಿತ, ಮಹೇಶ, ಚೇತನ್, ಪ್ರದೀಪ, ಚಂದನ, ಯೋಗೇಶ್ ಟಿ.ಎಚ್, ಮಂಜಯ್ಯ, ಈರಯ್ಯ, ಕೋಡಿಗಯ್ಯ, ಭದ್ರಯ್ಯ, ದಾಸಯ್ಯ, ಕುಮಾರ್, ಕಲಾವಿದರಾದ ಎಚ್.ಎಸ್. ಪ್ರಭಾಕರ್, ಗ್ಯಾರಂಟಿ ರಾಮಣ್ಣ, ಪೂಜಾ ರಘುನಂದನ್, ಸಾಹಿತಿಗಳಾದ ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜು, ವಾಸು ಸಮುದ್ರವಳ್ಳಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ