ಶಾಸಕ ಮಂಜುನಾಥ್ ಭಾಗಿ । 12 ತಿಂಗಳಿನಲ್ಲಿ ಕಾಮಗಾರಿ ಪೂರ್ಣ । ಸ್ಥಳೀಯ ಸಂಪರ್ಕ ವೃದ್ಧಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗದಿಂದ ಹನೂರು ನೂತನ ಬಸ್ ಡಿಪೋ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ಹನೂರಿನಲ್ಲಿ 4 ಎಕರೆ 50 ಸೆಂಟ್ಸ್ ವಿಸ್ತೀರ್ಣದಲ್ಲಿ 7.52 ಲಕ್ಷ ರು. ವೆಚ್ಚದಲ್ಲಿ ಆಧುನಿಕ ಬಸ್ ಡಿಪೋ ನಿರ್ಮಾಣವಾಗಲಿದೆ ಎಂದು ತಿಳಿಸಿದರು.1682 ಚದರ ಮೀಟರ್ ವಿಸ್ತೀರ್ಣದ ಮುಖ್ಯ ಕಟ್ಟಡದಲ್ಲಿ ನೆಲ ಮತ್ತು ಮೊದಲ ಅಂತಸ್ತು ಇರಲಿದೆ. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಸಿಬ್ಬಂದಿ ವಿಶ್ರಾಂತಿ ಕೊಠಡಿ, ತಾಂತ್ರಿಕ ಸಿಬ್ಬಂದಿ ಕೊಠಡಿ, ಸಂಚಾರ ಶಾಖೆ ಕೊಠಡಿ, ಭದ್ರತಾ ದ್ವಾರ ನಿರ್ಮಿಸಲಾಗುವುದು.
ಮಳೆಗಾಲವನ್ನು ಹೊರತುಪಡಿಸಿ 12 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುರಿ ಹೊಂದಲಾಗಿದೆ. ಹೊಸ ಬಸ್ ನಿಲ್ದಾಣದಿಂದ ಹನೂರು ಮತ್ತು ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
--
ಹನೂರು ನೂತನ ಬಸ್ ಡಿಪೋ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಶಂಕು ಸ್ಥಾಪನೆ ನೆರವೇರಿಸಿದರು.