ಧರ್ಮಸ್ಥಳಕ್ಕೆ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಭೇಟಿ

KannadaprabhaNewsNetwork |  
Published : Jan 12, 2024, 01:45 AM IST
ಪುತ್ತಿಗೆ ಮಠದ ಪೂಜ್ಯ ಸುಗುಣೇಂದ್ರತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ | Kannada Prabha

ಸಾರಾಂಶ

ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು.

ಬೆಳ್ತಂಗಡಿ: ಉಡುಪಿಯಲ್ಲಿ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮತ್ತು ಅವರ ಶಿಷ್ಯ ಕಿರಿಯ ಸ್ವಾಮೀಜಿ ಸುಶ್ರೀಂದ್ರತೀರ್ಥ ಸ್ವಾಮೀಜಿ ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಸ್ವಾಮೀಜಿದ್ವಯರು ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಆಶೀರ್ವಚನ ನೀಡಿದರು. ಕ್ಷೇತ್ರದ ಸಂಪ್ರದಾಯದಂತೆ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಭಕ್ತ್ತಿಪೂರ್ವಕ ಸ್ವಾಗತಕೋರಿ ಪರ್ಯಾಯ ಪೀಠಾರೋಹಣ ಹಾಗೂ ಎಲ್ಲ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿ ಅವರ ಅನುಗ್ರಹವನ್ನು ಕೋರಿದರು. ಪರ್ಯಾಯ ಸಮಿತಿಯ ಗೌರವಾಧ್ಯಕ್ಷರಾಗಿ ಸೇವೆ ಮಾಡಲು ತಮಗೆ ಅವಕಾಶ ದೊರಕಿರುವುದು ವಿಶೇಷ ಸಂತೋಷ ತಂದಿದೆ ಎಂದು ಹೆಗ್ಗಡೆ ಹೇಳಿದರು. ಧರ್ಮಸ್ಥಳದ ವತಿಯಿಂದ ಸ್ವಾಮೀಜಿಯವರನ್ನು ಹೆಗ್ಗಡೆಯವರು ಗೌರವಿಸಿದರು.

ಆಶೀರ್ವಚನ ನೀಡಿದ ಪುತ್ತಿಗೆ ಶ್ರೀಗಳು, ಹೆಗ್ಗಡೆ ಅವರ ದಕ್ಷ ನೇತೃತ್ವದಲ್ಲಿ ಧರ್ಮಸ್ಥಳದ ಭವ್ಯ ಪರಂಪರೆ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡು ಇಲ್ಲಿನ ಆಚಾರ-ವಿಚಾರಗಳು, ನಂಬಿಕೆ- ನಡವಳಿಕೆಗಳು, ಶಿಸ್ತು, ಸ್ವಚ್ಛತೆ ಮತ್ತು ಅನುಪಮ ಸೇವಾ ಕಾರ್ಯಗಳಿಂದಾಗಿ ಇಂದು ಧರ್ಮಸ್ಥಳ ಎಲ್ಲ ತೀರ್ಥಕ್ಷೇತ್ರಗಳಿಗೂ ಮಾದರಿಕ್ಷೇತ್ರವಾಗಿ ಬೆಳೆದಿದೆ. ವಿಶ್ವದೆಲ್ಲೆಡೆ ಬೆಳಗುತ್ತಿದೆ ಎಂದು ಸ್ವಾಮೀಜಿ ಶ್ಲಾಘಿಸಿದರು. ಹೆಗ್ಗಡೆಯವರ ಸೇವೆ- ಸಾಧನೆ ಹಾಗೂ ವಿಶಿಷ್ಟ ಕಾರ್ಯವೈಖರಿ ಉಡುಪಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿ ತಮಗೂ ಇದು ಸ್ಫೂರ್ತಿದಾಯಕವಾಗಿ ವಿಶೇಷ ಪ್ರೇರಣೆ ನೀಡುತ್ತದೆ ಎಂದರು.

ಡಿ. ಹರ್ಷೇಂದ್ರಕುಮಾರ್‌ ಅವರ ಕಾರ್ಯದಕ್ಷತೆ ಹಾಗೂ ಸೇವಾವೈಖರಿಯನ್ನು ಸ್ವಾಮೀಜಿ ಶ್ಲಾಘಿಸಿ ಅಭಿನಂದಿಸಿದರು.

ಸ್ವಾಮೀಜಿಯವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ,. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್‌ ಅವರಿಗೆ ಫಲಮಂತ್ರಾಕ್ಷತೆ ನೀಡಿ ಗೌರವಿಸಿ ಆಶೀರ್ವದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ