ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜಕ್ಕೆ ಅವರ ಕೊಟ್ಟಿರುವ ಕೊಡುಗೆ ಅಪಾರ. ಗುಣಮಟ್ಟದ ಶಿಕ್ಷಣ ವ್ಯಕ್ತಿಗೆ ಸಿಕ್ಕಾಗ ಅಭಿವೃದ್ಧಿ ಸಾಧ್ಯ ಎಂಬುದನ್ನು ಒತ್ತಿ ಹೇಳಿದ ನಾರಾಯಣ ಗುರುಗಳ ಸಿದ್ಧಾಂತಗಳ ಪಾಲನೆ ಆಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಪುತ್ತೂರು ಸಹಯೋಗದಲ್ಲಿ ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೨ ನೇ ಜಯಂತಿ ದಿನಾಚರಣೆಯನ್ನು ಉದ್ಘಾಟಿಸಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಮಾತನಾಡಿ ನಾರಾಯಣ ಗುರುಗಳ ತತ್ವ, ಆದರ್ಶ ಜಗತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಎಸ್.ಬಿ.ಕೂಡಲಗಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭಾ ಪೌರಾಯುಕ್ತೆ ವಿದ್ಯಾ ಕಾಳೆ ಉಪಸ್ಥಿತರಿದ್ದರು. ಬಿಲ್ಲವ ಸಮುದಾಯದ ಪ್ರಮುಖರಾದ ಆರ್.ಸಿ.ನಾರಾಯಣ, ಶಶಿಧರ್ ಕಿನ್ನಿಮಜಲು, ಡಾ. ರಾಜಾರಾಂ ಕೆ.ಬಿ. , ಜಯಂತ ನಡುಬೈಲು, ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಕೃಷ್ಣ ಪ್ರಸಾದ್ ಆಳ್ವ, ಮೌರಿಸ್ ಮಾಸ್ಕರೇನಸ್ ಪಾಲ್ಗೊಂಡಿದ್ದರು. ಉಪ ತಹಸೀಲ್ದಾರ್ ರವಿ ಕುಮಾರ್ ನಾಡಗೀತೆ ಹಾಡಿದರು. ಕಂದಾಯ ಇಲಾಖೆ ವಿಷಯ ನಿರ್ವಾಹಕ ಡಿ.ಟಿ. ದಯಾನಂದ ಸ್ವಾಗತಿಸಿದರು. ಶ್ರೀಕಲಾ ಕಾರಂತ್ ನಿರ್ವಹಿಸಿದರು.