ರಾಜ್ಯ ಸರ್ಕಾರದಿಂದ ಕಟ್ ಕನ್ವರ್ಷನ್ ಸಮಸ್ಯೆಗೆ ಪರಿಹಾರ: ಅಶೋಕ್‌ ರೈ

KannadaprabhaNewsNetwork |  
Published : Jan 28, 2026, 03:30 AM IST
ಫೋಟೋ: ೨೬ಪಿಟಿಆರ್-ಎಂಎಲ್‌ಎಸುದ್ಧಿಗೋಷ್ಠಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು.  | Kannada Prabha

ಸಾರಾಂಶ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜಾಗವನ್ನು ಕಟ್ ಮಾಡಿ ಕೃಷಿಯೇತರ ವಿಚಾರಗಳಿಗೆ ಬಳಕೆ ಮಾಡಿಕೊಂಡಿರುವ ಸುಮಾರು ೩೦ ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಯೋಜನವಾಗುವಂತೆ ರಾಜ್ಯ ಸರ್ಕಾರ ಇದೀಗ ಅನಧಿಕೃತ ಬಡಾವಣೆಗಳನ್ನು ಸಕ್ರಮೀಕರಿಸುವ ಮೂಲಕ ಕಟ್ ಕನ್ವರ್ಷನ್ ಸಮಸ್ಯೆಗೆ ಪರಿಹಾರ ನೀಡುವ ಮಹತ್ವದ ಕೆಲಸ

ಪುತ್ತೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜಾಗವನ್ನು ಕಟ್ ಮಾಡಿ ಕೃಷಿಯೇತರ ವಿಚಾರಗಳಿಗೆ ಬಳಕೆ ಮಾಡಿಕೊಂಡಿರುವ ಸುಮಾರು ೩೦ ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಯೋಜನವಾಗುವಂತೆ ರಾಜ್ಯ ಸರ್ಕಾರ ಇದೀಗ ಅನಧಿಕೃತ ಬಡಾವಣೆಗಳನ್ನು ಸಕ್ರಮೀಕರಿಸುವ ಮೂಲಕ ಕಟ್ ಕನ್ವರ್ಷನ್ ಸಮಸ್ಯೆಗೆ ಪರಿಹಾರ ನೀಡುವ ಮಹತ್ವದ ಕೆಲಸ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಅವರು ಈ ಬಗ್ಗೆ ಸೋಮವಾರ ಮಾಧ್ಯಮಗಳಿಗೆ ಮಾಹಿತಿ ನೀಡಿ ೨೦೨೪ರ ಸೆ.೧೦ರ ಮೊದಲು ರಚಿಸಲಾದ ಅಕ್ರಮ ಬಡಾವಣೆಗಳನ್ನು ರಾಜ್ಯ ಸರ್ಕಾರ ಅಕ್ರಮಗೊಳಿಸಲು ಮುಂದಾಗಿದೆ. ಇದರಿಂದ ಈ ಹಿಂದೆ ಕೃಷಿ ಕೃತಾವಳಿಯ ಜಮೀನಿನನ್ನು ತಮ್ಮ ಮಕ್ಕಳಿಗೆ ಪಾಲು ಮಾಡಿ ಹಂಚಿರುವ ಸಾಕಷ್ಟು ಮಂದಿಗೆ ಮನೆ ನಿರ್ಮಾಣ ಮಾಡಲು ಇದ್ದ ತೊಡಕು ನಿವಾರಣೆಯಾದಂತಾಗಿದೆ ಎಂದರು.ಇದು ದಕ್ಷಿಣ ಕನ್ನಡ ಮತ್ತು ಉಡುಪಿಜಿಲ್ಲೆಯ ಜನತೆಯ ಬಹು ವರ್ಷಗಳ ಬೇಡಿಕೆಯಾಗಿತ್ತು. ಕಟ್ ಕನ್ವರ್ಷನ್ ಸಮಸ್ಯೆಯಿಂದ ಇರುವ ಜಾಗವನ್ನೂ ಅನುಭವಿಸಲಾಗದೆ ತುಂಬಾ ಮಂದಿ ಪರದಾಡುವಂತಾಗಿತ್ತು. ಇಂತಹ ಜಾಗದಲ್ಲಿ ಅನಧಿಕೃತವಾದ ಬಡಾವಣೆಗಳನ್ನು ನಿರ್ಮಿಸಿದವರಿಗೂ ಸಾಕಷ್ಟು ತೊಂದರೆಗಳು ಉಂಟಾಗಿತ್ತು. ಸರ್ಕಾರ ಷರತ್ತುಬದ್ಧವಾಗಿ ಸಕ್ರಮಕ್ಕೆ ಅವಕಾಶ ಕಲ್ಪಿಸಿರುವುದು ಎಲ್ಲಾ ಸಮಸ್ಯೆಗಳನ್ನೂ ಪರಿಹಾರ ಮಾಡಿದಂತಾಗಿದೆ ಎಂದು ತಿಳಿಸಿದರು.

ಆದರೆ ೨೦೨೪ದ ನಂತರದ ಅಕ್ರಮ ಬಡಾವಣೆಗಳಿಗೆ ಈ ಸಕ್ರಮ ವ್ಯವಸ್ಥೆ ಇಲ್ಲ. ಇನ್ನು ಮುಂದೆ ಮಾಡುವ ಯಾವುದೇ ಅನಧಿಕೃತ ಬಡಾವಣೆಗಳಿಗೂ ಸಕ್ರಮದ ಅವಕಾಶವನ್ನು ಪ್ರಸ್ತುತ ನಿರಾಕರಣೆ ಮಾಡಲಾಗಿದೆ. ಇದು ರಾಜ್ಯ ಸರ್ಕಾರದ ಆದೇಶವಾಗಿದೆ ಎಂದು ಅವರು ತಿಳಿಸಿದರು.

ಧಾರ್ಮಿಕ ತಾಣಗಳಿಗೆ ಪಹಣಿ ಚಿಂತನೆ:ಪುತ್ತೂರು ತಾಲೂಕಿನ ಧಾರ್ಮಿಕ ತಾಣಗಳು ಬಹುತೇಕ ಸರ್ಕಾರಿ ಜಾಗದಲ್ಲಿದ್ದು, ಇದಕ್ಕೆ ಯಾವುದೇ ಅನುದಾನ ನೀಡಲು ಅವಕಾಶ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ತಾಲೂಕಿನ ೯ ಧಾರ್ಮಿಕ ತಾಣಗಳಿಗೆ ಜಾಗ ಮಂಜೂರು ಮಾಡಿ ದೇವರ ಹೆಸರಲ್ಲಿಯೇ ಪಹಣಿಪತ್ರಗಳನ್ನು ತಯಾರಿಸುವ ಕಾರ್ಯ ನಡೆಯುತ್ತಿದೆ. ತಾಲೂಕಿನ ದೈವಗಳ ಗುಡಿ, ಭಜನಾಮಂದಿರ, ದೇವಸ್ಥಾನ, ಚರ್ಚು, ಮಸೀದಿ ಸೇರಿದಂತೆ ಎಲ್ಲಾ ಧಾರ್ಮಿಕ ತಾಣಗಳು ಸರ್ಕಾರಿ ಜಾಗದಲ್ಲಿದ್ದರೆ ಅಂತಹ ಧಾರ್ಮಿಕ ತಾಣಗಳಿಗೆ ಸ್ವಂತ ನೆಲೆ ಕಲ್ಪಿಸುವ ಚಿಂತನೆ ಇದರ ಹಿಂದೆ ಅಡಗಿದೆ. ಪ್ರಸ್ತುತ ಪ್ರಾಯೋಗಿಕ ನೆಲೆಯಲ್ಲಿ ಈ ಕಾರ್ಯ ನಡೆಯುತ್ತಿದೆ. ಮುಂದೆ ಎಲ್ಲಾ ಧಾರ್ಮಿಕ ತಾಣಗಳಿಗೂ ಇದು ಅನ್ವಯವಾಗಲಿದೆ ಎಂದರು.ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ಸದಸ್ಯರಾದ ನಿಹಾಲ್ ಶೆಟ್ಟಿ, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇನಸ್, ಗ್ಯಾರಂಟಿಯೋಜನೆಯ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಪಿ.ಆಳ್ವ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ