ಪುತ್ತೂರು- ಮಂಗಳೂರು ‘ನಾನ್‌ ಸ್ಟಾಪ್ ಬಸ್’ ಸಂಚಾರ: ಅಶೋಕ್ ರೈ

KannadaprabhaNewsNetwork |  
Published : Jun 25, 2025, 11:47 PM IST
ಫೋಟೋ: ೨೪ಪಿಟಿಆರ್-ಕೆಎಸ್‌ಆರ್‌ಟಿಸಿಶಾಸಕರ ಕಚೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ, ಲೋಪದೋಷಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಯಿತು | Kannada Prabha

ಸಾರಾಂಶ

ಪುತ್ತೂರು-ಮಂಗಳೂರು ನಡುವೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್‌ ಸರ್ಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ. ಪ್ರಾರಂಭದಲ್ಲಿ ೬ ಬಸ್‌ಗಳು ಸಂಚಾರ ಆರಂಭಿಸಲಿದೆ. ಹೊಸ ಎಕ್ಸ್‌ಪ್ರೆಸ್‌ ಬಸ್‌ ಪುತ್ತೂರಿನಿಂದ ಹೊರಟು ಒಂದು ಗಂಟೆಯೊಳಗೆ ಮಂಗಳೂರು ತಲುಪಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರುಪುತ್ತೂರು-ಮಂಗಳೂರು ನಡುವೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್‌ ಸರ್ಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ. ಪ್ರಾರಂಭದಲ್ಲಿ ೬ ಬಸ್‌ಗಳು ಸಂಚಾರ ಆರಂಭಿಸಲಿದೆ. ಪುತ್ತೂರು ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಾಗದೆ ನೇರವಾಗಿ ಸ್ಟೇಟ್ ಬ್ಯಾಂಕ್ ನಿಲ್ದಾಣದಲ್ಲೇ ನಿಲುಗಡೆಯಾಗಲಿದೆ. ಹೊಸ ಎಕ್ಸ್‌ಪ್ರೆಸ್‌ ಬಸ್‌ ಪುತ್ತೂರಿನಿಂದ ಹೊರಟು ಒಂದು ಗಂಟೆಯೊಳಗೆ ಮಂಗಳೂರು ತಲುಪಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಅವರು ಶಾಸಕರ ಕಚೇರಿಯಲ್ಲಿ ಸೋಮವಾರ ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ಇರುವ ಲೋಪ ದೋಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆಗಾಲ ಮತ್ತು ಶಾಲಾ ಪ್ರಾರಂಭದ ದಿನಗಳಾಗಿರುವ ಕಾರಣ ಶಾಲಾ ಮಕ್ಕಳಿಗೆ ಬಸ್ ಇಲ್ಲದೆ ಯಾವುದೇ ತೊಂದರೆಗಳು ಉಂಟಾದಲ್ಲಿ, ಬಸ್ ಕೊರತೆಯಾದಲ್ಲಿ ತನ್ನ ಗಮನಕ್ಕೆ ತರಬೇಕು ಎಂದು ಶಾಸಕರು ತಿಳಿಸಿದರು.ವಿಟ್ಲ ಮೂಲಕ ಬೆಂಗಳೂರಿಗೆ ಅಂಬಾರಿ:ಮಂಗಳೂರಿನಿಂದ ಬಂಟ್ವಾಳ- ಕಲ್ಲಡ್ಕ-ವಿಟ್ಲ -ಪುತ್ತೂರು -ಉಪ್ಪಿನಂಗಡಿ ಮಾರ್ಗವಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ ಬಸ್ ಸಂಚಾರ ನಡೆಸಲಿದೆ. ಪ್ರತೀ ದಿನ ಈ ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಇದು ಹವಾನಿಯಂತ್ರಿತ ವ್ಯವಸ್ಥೆಯನ್ನೊಳಗೊಂಡಿರುತ್ತದೆ. ವಿಟ್ಲ ಮೂಲಕ ಬೆಂಗಳೂರಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಪ್ರಯಾಣಿಕರಿಂದ ಬೇಡಿಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ರೂಟ್ ವ್ಯವಸ್ಥೆಯೂ ಶೀಘ್ರ ಆರಂಭವಾಗಲಿದೆ ಎಂದು ಶಾಸಕರು ತಿಳಿಸಿದರು.ಪುತ್ತೂರಿಗೆ ಹೊಸದಾಗಿ ೩೨೬ ಮಂದಿ ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡಲಾಗಿದೆ. ೫೦೦ ಮಂದಿ ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದು, ಈ ಪೈಕಿ ಮೊದಲ ಹಂತದಲ್ಲಿ ೩೨೬ ಮಂದಿಯನ್ನು ಪುತ್ತೂರಿಗೆ ನೇಮಕ ಮಾಡಲಾಗಿದೆ. ಈ ಮೂಲಕ ಕೊರತೆಯನ್ನು ನೀಗಿಸಲಾಗಿದೆ. ಹೊಸದಾಗಿ ನೇಮಕವಾಗಿರುವ ಚಾಲಕ ಮತ್ತು ನಿರ್ವಾಹಕರು ಕನಿಷ್ಠ ೫ ವರ್ಷಗಳ ಕಾಲ ಪುತ್ತೂರಿನಲ್ಲಿಯೇ ಕರ್ತವ್ಯವನ್ನು ಮಾಡಬೇಕು ಎಂಬುದು ಸರಕಾರದ ಆದೇಶವಾಗಿರುತ್ತದೆ ಎಂದರು.ಸಭೆಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಅಮಲಿಂಗಯ್ಯ ಹೊಸ ಪೂಜಾರಿ, ವಿಬಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಂತ್ , ಡಿಪೋ ಮೆನೆಜರ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ