ಅಪಾಯದಲ್ಲಿ ಅಂಬಟೆಮೂಲೆ ಸೇತುವೆ; ಸಂಚಾರ ನಿಷೇಧ

KannadaprabhaNewsNetwork |  
Published : Jun 30, 2024, 12:49 AM IST
ಫೋಟೋ: ೨೯ಪಿಟಿಆರ್-ಸೇತುವೆ ಸೇತುವೆಯ ಮೇಲೆ ಗ್ರಾಪಂನಿಂದ ವಾಹನ ಸಂಚಾರ ನಿಷೇಧದ ಬ್ಯಾನರ್ ಅಳವಡಿಸಿರುವುದು | Kannada Prabha

ಸಾರಾಂಶ

ವಾಹನ ಸಂಚಾರವನ್ನು ನಿಷೇಧಿಸಿ ಸೇತುವೆಯ ಎರಡೂ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಂಚಾರ ತಡೆಯಲು ರಸ್ತೆ ನಡುವೆ ಯಾವುದೇ ತಡೆಗಳನ್ನು ನಿರ್ಮಿಸಲಾಗಿಲ್ಲ. ಇದರಿಂದಾಗಿ ವಾಹನ ಸಂಚಾರವು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಂಬಟೆಮೂಲೆ ಎಂಬಲ್ಲಿನ ಸೇತುವೆಯಲ್ಲಿ ಹೊಂಡಬಿದ್ದು ಸಂಚಾರಕ್ಕೆ ಅಪಾಯವಿರುವ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ಬಡಗನ್ನೂರು ಗ್ರಾಮ ಪಂಚಾಯಿತಿ ಈ ಬಗ್ಗೆ ಬ್ಯಾನರ್ ಅಳವಡಿಸಿ ರಸ್ತೆ ಸಂಚಾರವನ್ನು ನಿಷೇಧಗೊಳಿಸಿರುವ ಬಗ್ಗೆ ಪ್ರಕಟಿಸಿದೆ. ಪಂಚಾಯಿತಿ ವ್ಯಾಪ್ತಿಯ ಪೆರಿಗೇರಿ- ಈಶ್ವರಮಂಗಲ ಸಂಪರ್ಕ ರಸ್ತೆಯಾಗಿರುವ ಈ ರಸ್ತೆಯಲ್ಲಿ ಅಂಬಟೆಮೂಲೆ ಎಂಬಲ್ಲಿ ಸೇತುವೆಯೊಂದಿದ್ದು, ಈ ಸೇತುವೆಯ ಒಂದು ಭಾಗದಲ್ಲಿ ದೊಡ್ಡ ಗಾತ್ರದ ಹೊಂಡ ಕಾಣಿಸಿಕೊಂಡು ಅಪಾಯದ ಸ್ಥಿತಿಯಲ್ಲಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕಳೆದ ಎರಡು ದಿನಗಳ ಹಿಂದೆ ಈ ಬೃಹತ್ ಗಾತ್ರದ ಹೊಂಡ ಕಾಣಿಸಿಕೊಂಡಿದೆ.

ವಾಹನ ಸಂಚಾರವನ್ನು ನಿಷೇಧಿಸಿ ಸೇತುವೆಯ ಎರಡೂ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಂಚಾರ ತಡೆಯಲು ರಸ್ತೆ ನಡುವೆ ಯಾವುದೇ ತಡೆಗಳನ್ನು ನಿರ್ಮಿಸಲಾಗಿಲ್ಲ. ಇದರಿಂದಾಗಿ ವಾಹನ ಸಂಚಾರವು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ಅಂಬಟೆಮೂಲೆ ಪರಿಸರದಿಂದ ಈಶ್ವರಮಂಗಲ ಪೇಟೆ, ಪಟ್ಟೆ ಮತ್ತು ಪೆರಿಗೇರಿ ಪ್ರದೇಶಗಳನ್ನು ಸಂಪರ್ಕಿಸಲು ಈ ರಸ್ತೆ ಏಕೈಕ ರಸ್ತೆಯಾಗಿದೆ. ವಿದ್ಯಾರ್ಥಿಗಳಿಗೂ ಶಾಲೆ ಕಾಲೇಜುಗಳಿಗೆ ತೆರಳಲು ಈ ರಸ್ತೆಯಲ್ಲಿ ಸಾಗುವುದು ಅನಿವಾರ್ಯವಾಗಿದೆ. ಇದೀಗ ರಸ್ತೆಯಲ್ಲಿ ಘನ ವಾಹನಗಳು ಸಂಚರಿಸುವುದು ಕಡಿಮೆಯಾಗಿದ್ದರೂ ದಿನಂಪ್ರತಿ ಇತರ ನೂರಾರು ವಾಹನಗಳು ಓಡಾಟ ನಡೆಸುತ್ತಿವೆ. ಸೇತುವೆಯ ಮೇಲೆ ಸಂಚಾರದ ಅನಿವಾರ್ಯತೆಯ ಜೊತೆಗೆ ಹೆಚ್ಚು ಅಪಾಯಕಾರಿಯಾಗಿರುವುದರಿಂದ ಹಾಗೂ ವಾಹನ ಸಂಚಾರದಿಂದ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ. ಈ ಸೇತುವೆ ಕುಸಿತಗೊಂಡಲ್ಲಿ ಈ ಭಾಗದ ಸಾರ್ವಜನಿಕರು ಬಹಳಷ್ಟು ಸಂಕಷ್ಟ ಎದುರಿಸಬೇಕಾಗಿದೆ. ಪುತ್ತೂರಿನಲ್ಲಿ ಬಂದ್ ಆಗಿರುವ ೨ನೇ ಸೇತುವೆ: ಪುತ್ತೂರಿನಲ್ಲಿ ಮುಳುಗು ಸೇತುವೆ ಎಂದೇ ಪ್ರಚಲಿತವಾಗಿರುವ ಚೆಲ್ಯಡ್ಕ ಮುಳುಗು ಸೇತುವೆಯು ತೀರಾ ನಾದುರಸ್ತಿಯಲ್ಲಿದ್ದ ಕಾರಣ ಹಾಗೂ ಇಲ್ಲಿ ಸ್ವಲ್ಪ ಹೆಚ್ಚು ಮಳೆಯಾದರೂ ನೀರು ತುಂಬಿ ರಸ್ತೆ ಮೇಲೆ ಹರಿದು ವಾಹನ ಸಂಚಾರ ಸ್ಥಗಿತಗೊಳ್ಳುತ್ತಿರುವ ಕಾರಣ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೇತುವೆಯ ಮೂಲಕ ವಾಹನ ಸಂಚಾರವನ್ನು ರಾತ್ರಿ ವೇಳೆಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ಹಗಲು ವೇಳೆಯಲ್ಲಿ ಘನ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಆದೇಶ ನೀಡಿದ್ದರು. ಇದೀಗ ಅಂಬಟೆಮೂಲೆ ಸೇತುವೆಯಲ್ಲಿ ಸಂಚಾರವನ್ನು ಬಡಗನ್ನೂರು ಪಂಚಾಯಿತಿ ಸ್ಥಗಿತಗೊಳಿಸುವ ಮೂಲಕ ಪುತ್ತೂರು ತಾಲೂಕಿನ ೨ ಸೇತುವೆಗಳಲ್ಲಿ ವಾಹನ ಸಂಚಾರ ನಿಲುಗಡೆಯಾಗಿದೆ. ಈ ಭಾಗದ ಪ್ರಯಾಣಿಕರು ಸುತ್ತು ಬಳಸಿ ಸಾಗುವುದು ಅನಿವಾರ್ಯವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!