ಪುತ್ತೂರು: ಶ್ರೀ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ವತಿಯಿಂದ ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ ಪ್ರಯುಕ್ತ ಮೇ ೩ರಂದು ಪುತ್ತೂರಿನ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಶಂಕರ ವಿಜಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವಿವಿಧ ಬಹುಮಾನಗಳು: ಪ್ರತಿಯೊಂದು ವಿಭಾಗದಲ್ಲೂ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳು ಲಭ್ಯವಿದ್ದು, ಬಹುಮಾನಗಳು ಲ್ಯಾಪ್ ಟಾಪ್, ಟ್ಯಾಬ್ ಮೊದಲಾದ ಆಕರ್ಷಕ ವಸ್ತು ವಿಶೇಷಗಳನ್ನು ಒಳಗೊಂಡಿವೆ. ಒಟ್ಟು ಎರಡೂವರೆ ಲಕ್ಷ ರೂಪಾಯಿಗಳಿಗಿಂತಲೂ ಅಧಿಕ ಮೊತ್ತದ ಬಹುಮಾನಗಳು ಈ ಸ್ಪರ್ಧೆಯಲ್ಲಿ ಒಳಗೊಂಡಿವೆ. ಜತೆಗೆ ಪ್ರತಿ ಸ್ಪರ್ಧೆಯಲ್ಲೂ ಆಯ್ದ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನಗಳು ದೊರೆಯಲಿವೆ. ಜಗದ್ಗುರುಗಳಿಂದಲೇ ಬಹುಮಾನ ವಿತರಣೆ: ವಿಜೇತರಾದವರಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಮೇ ೭ರಂದು ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬಹುಮಾನ ವಿತರಿಸಿ ಹರಸಲಿದ್ದಾರೆ.
ನೋಂದಾವಣೆ: ಈ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಮೇಲೆ ಉಲ್ಲೇಖಿಸಿದ ಐದು ತಾಲೂಕುಗಳ ಅಥವ ಈ ತಾಲೂಕುಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅವಕಾಶವಿದ್ದು, ಮೇ ೧ರ ಮೊದಲಾಗಿ ನೋಂದಾವಣೆ ಮಾಡುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ : ೯೪೮೩೪೩೫೬೯೬, ೯೪೮೩೯೩೪೧೭೦ ಅಥವ ೯೪೪೯೧೦೨೦೮೨ ಸಂಖ್ಯೆಗೆ ಕರೆ ಮಾಡಬಹುದು ಎಂದು ಸಂಘಟಕರು ತಿಳಿಸಿದ್ದಾರೆ.