)
ಪುತ್ತೂರು: ಆಯುರ್ವೇದ ತಜ್ಞ ವೈದ್ಯ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ನೇತೃತ್ವದ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, (www.Prasadini.com) ನರಿಮೊಗರು, ಪುತ್ತೂರು ಆಶ್ರಯದಲ್ಲಿ "ಯಕ್ಷ ಪ್ರಸಾದಿನೀ-2026 " ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಶ್ರೀ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ, ಪೆರ್ಡೂರು ಅವರಿಂದ, ಪೌರಾಣಿಕ ಕಥಾನಕ "ಕಾರ್ತವೀರ್ಯ -ಚಕ್ರ ಚಂಡಿಕೆ " ಪೌರಾಣಿಕ ಯಕ್ಷಗಾನ ಪ್ರದರ್ಶನ ಜರುಗಿತು.ರಾಘವೇಂದ್ರ ಆಚಾರ್ಯ ಜನ್ಸಾಲೆ ಹಾಗೂ ಪ್ರಸನ್ನಭಟ್ ಬಾಳ್ಕಲ್ ಭಾಗವತಿಕೆಯೊಂದಿಗೆ ಪಾತ್ರಧಾರಿಗಳ ಭಾಗವಹಿಸುವಿಕೆಯಲ್ಲಿ ಆಯೋಜಿಸಲಾಯಿತು.ನೀಲ್ಕೋಡು ಶಂಕರ ಹೆಗಡೆ ಕಾರ್ತವೀರ್ಯನಾಗಿ , ಕಾರ್ತಿಕ್ ಚಿಟ್ಟಾಣಿ ಬರ್ಬರಿಕನಾಗಿ , ಸನ್ಮಯ್ ಕೃಷ್ಣ ಮಳವಳ್ಳಿ ಕೃಷ್ಣನಾಗಿ , ನಾಗರಾಜ್ ಭಟ್ ಕುಂಕಿಪಾಲ ವತ್ಸಲೆಯಾಗಿ ಮಿಂಚಿದರು.ಸಾವಿರಕ್ಕೂ ಮಿಕ್ಕಿದ ಪ್ರೇಕ್ಷಕರು ಯಕ್ಷಗಾನ ವೀಕ್ಷಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .ಸಂಘಟಕ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹಾಗೂ ಡಾ .ಶ್ರುತಿ ಎಂ.ಎಸ್ . ಸ್ವಾಗತಿಸಿದರು.ಕಾರ್ಯಕ್ರಮದ ಆಯೋಜಕ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಮಾತನಾಡಿ, ಚಂದ್ರ ಗ್ರಹಣ ಬರುತ್ತದೆ ಹೋಗುತ್ತದೆ. ಆದರೆ ಮನಸ್ಸು ಬುದ್ಧಿಗಳಿಗೆ ಹಿಡಿದ ಗ್ರಹಣ ಯಾವಾಗಲೂ ಇರುತ್ತದೆ. ಅದಕ್ಕೆ ಮೋಕ್ಷ ನೀಡುವುದಕ್ಕೆ ಯಕ್ಷಗಾನದಂತಹ ಆರಾಧನಾ ಕಲೆಗಳಿಗೆ ಸಾಮರ್ಥ್ಯ ಇದೆ. ಯಕ್ಷಗಾನ ಕೇವಲ ಮನರಂಜನೆ ಅಲ್ಲ , ಉಪಾಸನೆ ಎಂದು ತಿಳಿಸಿದರು.ಸ್ಥಳದಾನದ ಸಹಕಾರವನ್ನು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನರಿಮೊಗರು ಮುಖ್ಯಗುರು, ಸಿಬ್ಬಂದಿವರ್ಗ , ಎಸ್ .ಡಿ .ಎಂ .ಸಿ. ಅಧ್ಯಕ್ಷರು ಹಾಗೂ ಸದಸ್ಯರು , ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತಾಧಿಕಾರಿಗಳು, ಅರ್ಚಕರು ಹಾಗೂ ಸಿಬ್ಬಂದಿವರ್ಗ, ನರಿಮೊಗರಿನ ಮರಾಟಿ ಸಮಾಜಸೇವಾ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು. ನರಿಮೊಗರು ಸುವರ್ಣ ಎಸ್ಟೇಟ್ ವೇದನಾಥ್ ಸುವರ್ಣ, ವಿಶ್ರಾಂತ ಪ್ರಾಚಾರ್ಯ ದುಗ್ಗಪ್ಪ , ಮೃತ್ಯುಂಜಯೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಕೆ .ಟಿ .ಗೋಪಾಲ್, ಸಂಚಾಲಕ ಗಂಗಾಧರ ಸುವರ್ಣ , ಸ್ಥಳೀಯ ಸಾಮಾಜಿಕ ಮುಂದಾಳು ಪ್ರವೀಣ್ ಆಚಾರ್ಯ , ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ, ನರಿಮೊಗರು ಶಾಲಾ ಎಸ್ .ಡಿ.ಎಂ .ಸಿ .ಅಧ್ಯಕ್ಷ ಪ್ರವೀಣ್ ಪೂಜಾರಿ , ಮುಖ್ಯಗುರು ಚರಣ್ ಕುಮಾರ್ , ಶಿಕ್ಷಕಿ ಶ್ರೀಲತಾ , ಪೂರ್ಣಿಮಾ ಸೋಪ್ ಇಂಡಸ್ಟ್ರಿಯ ಶ್ರೀನಿವಾಸ್ ರಾವ್ , ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯ ಈಶ್ವರ ಬಡೇಕಾರ್ , ಕೆ .ಎಸ್ .ಆರ್ .ಟಿ .ಸಿ ಡಿಪೋ ಮ್ಯಾನೇಜರ್ ಸುಬ್ರಮಣ್ಯ ಪ್ರಕಾಶ್, ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಲಿಂಗ ನಾಯ್ಕ್ , ಕೆ .ಎಂ .ಎಫ್ ಉದ್ಯೋಗಿ ಸದಾಶಿವ ನಾಯ್ಕ್, ಸಾಮಾಜಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ, ನಾರಾಯಣ ಬನ್ನಿಂತಾಯ , ವೈದ್ಯ ಡಾ . ಸುರೇಶ್ ಪುತ್ತೂರಾಯ, ರೋಟರಿ ಕ್ಲಬ್ ಅಧ್ಯಕ್ಷ ಡಾ . ಪ್ರಕಾಶ್ ಬಂಗಾರಡ್ಕ ಮತ್ತಿತರರು ಉಪಸ್ಥಿತರಿದ್ದರು .