ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಂತೋಷದ ಸಂಗತಿ: ಶಾಸಕ ಡಾ. ಚಂದ್ರು ಲಮಾಣಿ

KannadaprabhaNewsNetwork |  
Published : Apr 05, 2026, 02:15 AM IST
ಪೊಟೋ- ಪಟ್ಟಣದ ರಂಭಾಪುರಿ ಜ.ವೀರಗಂಗಾಧರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಚಂದ್ರು ಲಮಾಣಿ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿನ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹಲವಾರು ಅನುದಾನಕ್ಕಾಗಿ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಲಕ್ಷ್ಮೇಶ್ವರ: ಪಟ್ಟಣದ ಜಗದ್ಗುರು ಲಿಂ. ವೀರಗಂಗಾಧರ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಯನ್ನು ರಾಜ್ಯ ವಲಯ ವಿಶೇಷ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಡಿ ಸುಮಾರು ₹11.88 ಲಕ್ಷ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿನ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹಲವಾರು ಅನುದಾನಕ್ಕಾಗಿ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಅದರಂತೆ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಆದ್ಯತೆಗೆ ಅನುಗುಣವಾಗಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಅದಕ್ಕೆ ತಕ್ಕಂತೆ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಟ್ಟಣದ ವೀರಗಂಗಾಧರ ಸರ್ಕಾರಿ ಪ್ರೌಢಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಇದೀಗ ಚಾಲನೆ ನೀಡಲಾಗಿದ್ದು, ಈ ಶಾಲೆಯ ಕಾಂಪೌಂಡ್ ಗೋಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವದು ಎಂದು ಹೇಳಿದರು.

ಈ ವೇಳೆ ರಾಜ್ಯ ಪ್ರಶಸ್ತಿಗೆ ಭಾಜನರಾದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯಕ್ ಅವರನ್ನು ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಕೆ. ಹವಾಲ್ದಾರ್, ಮುಖ್ಯೋಪಾಧ್ಯಾಯ ಬಿ.ಸಿ. ಪಟ್ಟೇದ, ಎ.ಎನ್. ಮುಳಗುಂದ, ಎಚ್.ಎಂ. ಗುತ್ತಲ್, ಎಸ್.ಡಿ. ಲಮಾಣಿ, ಎಂ.ಆರ್. ಹಿರೇಮಠ, ಎಸ್.ಜಿ. ಅಂಗಡಿ, ಎನ್.ಎನ್. ಸುಣಗಾರ, ಎಸ್.ಎಸ್. ರಾಥೋಡ, ಎ.ಎಂ. ಅಕ್ಕಿ, ಪಿ.ಎಸ್. ಪುರಾಣಿಕಮಠ, ಯು.ಎಸ್. ನೇಕಾರ, ಎಸ್.ಬಿ. ಪೂಜಾರ, ವಿಜಯಕುಮಾರ ಹತ್ತಿಕಾಳ, ಬಿಜೆಪಿ ನಗರ ಘಟಕದ ನೂತನ ಅಧ್ಯಕ್ಷ ವಿಜಯ ಕುಂಬಾರ, ನೂತನ ಪ್ರಧಾನ ಕಾರ್ಯದರ್ಶಿ ಪ್ರವೀಣ ಬೋಮಲೆ, ಗಂಗಾಧರ ಮೆಣಸಿನಕಾಯಿ, ಸೋಮೇಶ ಉಪನಾಳ, ಗಿರೀಶ ಚೌರಡ್ಡಿ, ಬಸವರಾಜ ಚಕ್ರಸಾಲಿ, ಈರಪ್ಪ ಹಾದಿಮನಿ, ಆರ್.ಐ.ಹಬಸಿ, ಆರ್.ಬಿ. ಆಚಾರ್ಯ, ನಾಯ್ಕರ್, ಎ.ಎಂ.ಕುಂಬಾರ, ಚಂದ್ರು ಮಾಗಡಿ, ಎನ್.ಬಿ. ರಡ್ಡೇರ ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುವರ್ಣನ್ಯೂಸ್‌ನ ಷಡಕ್ಷರಿಗೆ ಲಿಂಗಸುಗೂರು ಸಿದ್ರಾಮಪ್ಪ ಪ್ರಶಸ್ತಿ
ಸಮುದಾಯ ಆರೋಗ್ಯ ಕೇಂದ್ರಕ್ಕಿಲ್ಲ ಉದ್ಘಾಟನೆ ಭಾಗ್ಯ!