ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ದಾನಮ್ಮ ಕಾಂಪ್ಲೆಕ್ಸ್ನಲ್ಲಿ ರೋಟರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಶಿಕ್ಷಣ ವ್ಯವಸ್ಥೆ ಕೇವಲ ಅಂಕಗಳಿಗೆ ಸೀಮಿತವಾಗಿದೆ. ಮಕ್ಕಳು ಅಂಕ ಗಳಿಸುವ ಯಂತ್ರಗಳಾಗದೆ, ಬೌದ್ಧಿಕವಾಗಿ, ಸೃಜನಶೀಲವಾಗಿ ಬೆಳೆಯುವಂತೆ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕಿದೆ. ಖಾಸಗಿ ಶಾಲೆಗಳ ಹಿಂದೆ ಹೋಗುವ ಅಗತ್ಯವಿಲ್ಲ. ಸರ್ಕಾರಿ ಶಾಲೆಗಳಲ್ಲೇ ಇಂದು ಗುಣಮಟ್ಟದ ಶಿಕ್ಷಕರು ದೊರೆಯುತ್ತಿದ್ದು, ಮಕ್ಕಳು ಉತ್ತಮ ಶಿಕ್ಷಣ ಪಡೆಯಬಹುದು. ಸರ್ಕಾರಿ ಶಾಲೆಗಳಲ್ಲಿ ಈಗ ಹಿಂದೆಗಿಂತಲೂ ಹೆಚ್ಚು ಸೌಲಭ್ಯಗಳು ದೊರೆಯುತ್ತಿವೆ. ಅರ್ಹತೆ ಪಡೆದ, ತರಬೇತಿ ಹೊಂದಿದ ಗುಣಮಟ್ಟದ ಶಿಕ್ಷಕರು ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ನೀಡುತ್ತಿದ್ದಾರೆ ಎಂದರು.ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದಿನ ಕಾಲದ ಶಿಕ್ಷಣಕ್ಕೂ ಇಂದಿನ ಕಾಲದ ಶಿಕ್ಷಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಿಂದೆ ಶಿಕ್ಷಣವು ಜೀವನದ ಪಾಠ ಕಲಿಸುತ್ತಿತ್ತು, ಈಗಿನ ಶಿಕ್ಷಣ ವ್ಯವಸ್ಥೆ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗಿರುವುದರಿಂದ ನಾವು ಜೀವನದ ನಿಜವಾದ ಪಾಠದಿಂದ ಹಿಂದೆ ಉಳಿದಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.
ತಾಲೂಕಿನ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ರೋಟರಿ ಸಂಸ್ಥೆಯ ಅಧ್ಯಕ್ಷ ಎಚ್.ಇ. ಮಾಲತೇಶ, ಕಾರ್ಯದರ್ಶಿ ಪ್ರಕಾಶ್, ಸಮಾಜ ಸೇವಕ ನಾಗರಾಜ ಗುತ್ತಿ, ರಂಗನಾಥ ಶಾಲೆಯ ಕಾರ್ಯದರ್ಶಿ ನೀಲಪ್ಪ ಡಿ. ಬೂತಣ್ಣನವರ್, ಮಹಾಂತೇಶ್, ಪಾಣಿ ರಾಜಪ್ಪ, ಶಿವನಂದಪ್ಪ ಬಿಳಾಗಿ, ಸಿ.ಬಿ. ಈಶ್ವರಪ್ಪ, ಆಶಾ, ಶಿಲ್ಪ, ಕವಿತ, ಮಂಜುಳಾ, ವೀಣಾ ಶ್ರೀಧರ್ ಮೊದಲಾದವರಿದ್ದರು.