ಉತ್ತಮ ಇಳುವರಿಗೆ ಗುಣಮಟ್ಟದ ಬೀಜೋಪಚಾರ ಮುಖ್ಯ

KannadaprabhaNewsNetwork |  
Published : Jun 17, 2024, 01:30 AM IST
ಪೋಟೋ 1 : ಕುಂಟಬೊಮ್ಮನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬೀಜೋಪಚಾರ ಮತ್ತು ಸುರಕ್ಷಿತ ಪೀಡೆ ನಾಶಕಗಳ ಬಳಕೆ ಕುರಿತ ತರಬೇತಿ ಕಾರ್ಯಕ್ರಮವನ್ನು ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗಯ್ಯ ಉದ್ಘಾಟಿಸಿದರು. | Kannada Prabha

ಸಾರಾಂಶ

ದಾಬಸ್‌ಪೇಟೆ: ಉತ್ತಮ ಇಳುವರಿ ಪಡೆಯಲು ಗುಣಮಟ್ಟದ ಬೀಜೋಪಚಾರಗಳ ಬಳಕೆ ಅತಿ ಮುಖ್ಯ ಎಂದು ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗಯ್ಯ ತಿಳಿಸಿದರು.

ದಾಬಸ್‌ಪೇಟೆ: ಉತ್ತಮ ಇಳುವರಿ ಪಡೆಯಲು ಗುಣಮಟ್ಟದ ಬೀಜೋಪಚಾರಗಳ ಬಳಕೆ ಅತಿ ಮುಖ್ಯ ಎಂದು ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗಯ್ಯ ತಿಳಿಸಿದರು.

ಸೋಂಪುರ ಹೋಬಳಿಯ ಕುಂಟಬೊಮ್ಮನಹಳ್ಳಿಯಲ್ಲಿ ಕೃಷಿ ಇಲಾಖೆ ಸಸ್ಯ ಸಂರಕ್ಷಣೆ ಯೋಜನೆಯಡಿ ರೈತರಿಗೆ ಆಯೋಜಿಸಿದ್ದ ಬೀಜೋಪಚಾರ ಮತ್ತು ಸುರಕ್ಷಿತ ಕೀಟ ನಾಶಕಗಳ ಬಳಕೆ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಳೆಗಳಿಗೆ ರೋಗರುಜುನಗಳು ಬಾರದಂತೆ ಬೀಜಗಳ ಬಿತ್ತನೆ ಸಮಯದಲ್ಲೇ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು. ಇದರಿಂದ ಬೆಳೆ ಸಮೃದ್ಧವಾಗಿ ಬೆಳೆದು ಇಳುವರಿ ಹೆಚ್ಚಾಗುತ್ತದೆ. ರಾಗಿ ಬೆಳೆಗೆ ಬರುವ ಬೆಂಕಿ ರೋಗ, ಕಾಂಡ ಕೊಳೆ ರೋಗಗಳಿಗೆ ಔಷದೋಪಚಾರ ಲಭ್ಯವಿದ್ದು, ಅದರ ಬಳಕೆಯ ಜೊತೆಗೆ ಮಣ್ಣು ಪರೀಕ್ಷೆ ಮಾಡಿಸಿ ಅದಕ್ಕೆ ಬೇಕಾದ ಪೋಷಕಾಂಶ ನೀಡಬೇಕು ಎಂದರು.

ರೈತರು ಎಫ್‌ಐಡಿ ಮಾಡಿಸಿ:ಸೋಂಪುರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪ್ರಭು ಮಾತನಾಡಿ, ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಸೋಂಪುರ ಹೋಬಳಿಯ ಕುಂಟಬೊಮ್ಮನಹಳ್ಳಿ, ಬರಗೂರು, ಮದಗ ಗ್ರಾಮಗಳಲ್ಲಿ 117 ಹೆಕ್ಟೇರ್‌ನಲ್ಲಿ ರಾಗಿ ಹಾಗೂ 35 ಹೆಕ್ಟೇರ್‌ನನಲ್ಲಿ ತೊಗರಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಅನುಷ್ಟಾನ ಮಾಡಲಾಗುತ್ತಿದೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು ಉತ್ತಮ ಬೆಳೆ ನಿರೀಕ್ಷೆ ಇದೆ. ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಿ ಸರ್ಕಾರದ ಸೌಲಭ್ಯ ಪಡೆಯಬೇಕು ಎಂದು ಕರೆ ನೀಡಿದರು.

ಸಿಂಜೆಂಟಾ ಕಂಪನಿಯ ವಾಹಿದ್ ಮಾತನಾಡಿ, ರೈತರು ಕ್ರಿಮಿಕೀಟ ನಾಶಕ ಸಿಂಪಡಿಸುವಾಗ ಮೂಗು, ಬಾಯಿಗೆ ಮಾಸ್ಕ್ ಧರಿಸಿರಬೇಕು, ಕಣ್ಣಿಗೆ ಕನ್ನಡಕ ಹಾಗೂ ಕೈಗವಸು ಧರಿಸುವುದು ಅಗತ್ಯ. ಕನಿಷ್ಟ ಮೂರು ದಿನಗಳ ಕಾಲ ಬೆಳೆಗಳ ಒಳಗೆ ಹೋಗಬಾರದು ಎಂದು ಕೀಟನಾಶಕ ಸಿಂಪಡಿಸುವ ಪ್ರಾತ್ಯಕ್ಷಿಕೆ ಪ್ರದರ್ಶಿಸಿ ರೈತರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಹನುಮಂತರಾಜು, ರಂಗಣ್ಣ, ಮಾರುತಿ, ನರಸಿಂಹಯ್ಯ, ರಘು, ಸಿಂಜೆಂಟಾ ಕಂಪನಿಯ ಅಂಜನಪ್ಪ, ಕೃಷಿ ಅಧಿಕಾರಿ ಶಭಾನಾ ಡಿ ನದಾಫ್, ಜಲಾನಯನ ಸಹಾಯಕ ಕೆಂಪರಾಜು, ವೀಣಾ ಸೇರಿದಂತೆ ರೈತರು ಉಪಸ್ಥಿತರಿದ್ದರು.ಪೋಟೋ 1 : ಕುಂಟಬೊಮ್ಮನಹಳ್ಳಿಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಬೀಜೋಪಚಾರ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತ ತರಬೇತಿ ಕಾರ್ಯಕ್ರಮವನ್ನು ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗಯ್ಯ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!