ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ: ಡಾ.ನಾಗಲಕ್ಷ್ಮೀ ಮೆಚ್ಚುಗೆ

KannadaprabhaNewsNetwork |  
Published : Jul 11, 2024, 01:36 AM IST
10ಕೆಜಿಎಲ್19ಕೊಳ್ಳೇಗಾಲದ ಸಕಾ೯ರಿ ಆಸ್ಪತ್ರೆಗೆ ಮಹಿಳಾ ಅಯೋಗದ ರಾಜ್ಯಾಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪುಟ್ಟಮಗುವನ್ನು ಎತ್ತಿಕೊಂಡು ಬಾಣಂತಿಯರ ಯೋಗಕ್ಷೇಮ, ಸೂಕ್ತ ಚಿಕಿತ್ಸೆ ನೀಡುವ ಕುರಿತು ಚಚಿ೯ಸಿದರು. ಡಾ. ರಾಜಶೇಖರ್, ಡಾ. ಗೋಪಾಲ್ ಇದ್ದರು. | Kannada Prabha

ಸಾರಾಂಶ

ಕೊಳ್ಳೇಗಾಲ ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿರುವ ಕುರಿತು ಸಾರ್ವಜನಿಕರು, ರೋಗಿಗಳಿಂದ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು. ಕೊಳ್ಳೇಗಾಲ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿದ ವರದಿ ನೀಡಲು ತಾಕೀತುಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಕೊಳ್ಳೇಗಾಲ ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿರುವ ಕುರಿತು ಸಾರ್ವಜನಿಕರು, ರೋಗಿಗಳಿಂದ ಮಾಹಿತಿ ಲಭ್ಯವಾಗಿದ್ದು ಆರೋಗ್ಯಾಧಿಕಾರಿಗಳು, ವೈದ್ಯರು ಇದನ್ನೆ ಮುಂದುವರೆಸಿಕೊಂಡು ಹೋಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.ಕೊಳ್ಳೇಗಾಲ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಗರ್ಭಿಣಿ, ಬಾಣಂತಿಯರಿಂದ ಮಾಹಿತಿ ಪಡೆದು, ಕೆಲವು ರೋಗಿಗಳ ಆರೋಗ್ಯ ವಿಚಾರಿಸಿದರು. ಎಲ್ಲೆಡೆ ಡೆಂಘೀ ಉಲ್ಪಣವಾಗುತ್ತಿರುವ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಶೌಚಗೃಹದಲ್ಲೂ ಸ್ವಚ್ಛತೆ ಕಾಪಾಡುವಂತೆ ಸೂಚಿಸಲಾಗಿದೆ. ವೈದ್ಯರಿಂದ ಇಲ್ಲಿನ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿರುವುದರ ಕುರಿತು ನಿಜಕ್ಕೂ ಹೆಮ್ಮೆಯಾಗಿದ್ದು, ಅವರೆಲ್ಲರನ್ನು ಅಭಿನಂದಿಸಿ ಇದೇ ರೀತಿ ಸೇವೆ ಮಾಡುವಂತೆ ಹೇಳಿದರು.

ರೋಗಿಗಳಿಗೆ ಬಿಸಿನೀರು, ಕುಡಿಯುವ ಶುದ್ಧ ನೀರು ಪೂರೈಸಲು ತಾಕೀತು ಮಾಡಲಾಗಿದೆ. ಅದೇ ರೀತಿಯಲ್ಲಿ ಸರ್ಕಾರ ರೇಡಿಯೋಲಾಜಿಸ್ಟ್ ನೇಮಕಕ್ಕೆ ಸಿದ್ಧವಿದೆ. ಆದರೆ ಹುದ್ದೆಗೆ ಬರುವವರಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜತೆ ಚರ್ಚಿಸಿ, ಶೀಘ್ರದಲ್ಲೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರೇಡಿಯೋಲಾಜಿಸ್ಟ್ ನೇಮಕ ಮಾಡಿ ಕೊಡುವಂತೆ ಮನವಿ ಮಾಡುವೆ ಎಂದರು.ಈ ವೇಳೆ ನೀರಿನ ಟ್ಯಾಂಕ್ ಮೇಲ್ಛಾವಣೆ ಪರಿಶೀಲಿಸಿ ಕೂಡಲೆ ಟ್ಯಾಂಕ್ ಸ್ವಚ್ಛಗೊಳಿಸಿದ ವರದಿ ನೀಡುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ.ರಾಜಶೇಖರ್, ವ್ಯೆದ್ಯರಾದ ಡಾ.ಲೋಕೇಶ್ವರಿ, ಡಾ.ಟೀನಾ, ತಾಲೂಕು ಆರೋಗ್ಯಾಧಿಕಾರಿ ಡಾ.ಗೋಪಾಲ್ ಸೇರಿದಂತೆ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಉಮಾಶ್ರೀ ಎಚ್ಚರಿಕೆಗೆ ಹಿರಿಯ ರಂಗಕರ್ಮಿ ಪೆಚ್ಚು
ಗೌಡ, ಎಚ್‌ಡಿಕೆ ಜಾತಿವಾದಿಗಳಲ್ಲ, ಕುಟುಂಬವಾದಿಗಳು : ಸಿದ್ದರಾಮಯ್ಯ ತರಾಟೆ