ರಾಣಿ ಅಬ್ಬಕ್ಕ ದೇವಿಯ ಧೈರ್ಯ, ಸಾಹಸ ಎಲ್ಲರಿಗೂ ಸ್ಪೂರ್ತಿ

KannadaprabhaNewsNetwork |  
Published : Sep 18, 2025, 01:10 AM IST
ಪೋಟೋ೧೭ಸಿಎಲ್‌ಕೆ೨ ಚಳ್ಳಕೆರೆ ನಗರದ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಬ್ಬಕ್ಕದೇವಿ ಜಯಂತಿಯಲ್ಲಿ ಡಾ.ಜಿ.ವಿ.ರಾಜಣ್ಣ ವಿಶೇಷ ಉಪನ್ಯಾಸಕ ನೀಡಿದರು. | Kannada Prabha

ಸಾರಾಂಶ

ಚಳ್ಳಕೆರೆ ನಗರದ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಬ್ಬಕ್ಕದೇವಿ ಜಯಂತಿಯಲ್ಲಿ ಡಾ.ಜಿ.ವಿ.ರಾಜಣ್ಣ ವಿಶೇಷ ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಇತಿಹಾಸದ ಪುಟಗಳನ್ನು ನೋಡಿದಾಗ ಅನೇಕ ಮಹಾನೀಯರು ದೇಶ ಮತ್ತು ಸಮಾಜಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಕಿತ್ತೂರು ರಾಣಿ ಚನ್ನಮ್ಮದೇವಿಯಂತೆ ಕರಾವಳಿ ಪ್ರದೇಶದಲ್ಲೂ ಪೋರ್ಚಿಗಿಸ್‌ರನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿ ರಕ್ಷಣೆ ನೀಡಿದ ರಾಣಿ ಅಬ್ಬಕ್ಕದೇವಿ ಸಹ ನಾಡುಕಂಡ ಅಪರೂಪದ ವೀರರಾಣಿ ಎಂದು ನಗರದ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಓ.ಬಾಬುಕುಮಾರ್ ತಿಳಿಸಿದರು.

ಬುಧವಾರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಣಿ ಅಬ್ಬಕ್ಕದೇವಿ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ಇಂತಹ ಮಹಾನೀಯರ ಹೋರಾಟವನ್ನು ಚಿರಸ್ಥಾಯಿಯಾಗಿ ಉಳಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಪ್ರತಿವರ್ಷ ನಾವೆಲ್ಲರೂ ರಾಣಿ ಅಬ್ಬಕ್ಕ ದೇವಿಯ ಶೌರ್ಯ ಮತ್ತು ಸಾಹಸವನ್ನು ಕಾರ್ಯಕ್ರಮದ ಮೂಲಕ ಆಚರಿಸುವುದು ಸಂತಸ ತಂದಿದೆ ಎಂದರು.

ಕನ್ನಡ ಪ್ರಾಧ್ಯಾಪಕ ಡಾ.ಜಿ.ವಿ.ರಾಜಣ್ಣ ಮಾತನಾಡಿ, ರಾಣಿ ಅಬ್ಬಕ್ಕದೇವಿಯ ಜೀವನ ಚರಿತ್ರೆ ಎಲ್ಲರಿಗೂ ಸ್ಪೂರ್ತಿ, 16ನೇ ಶತಮಾನದಲ್ಲೇ ಶತ್ರುಗಳನ್ನು ಮೆಟ್ಟಿನಿಲ್ಲುವಂತ ದೈರ್ಯವನ್ನು ತೋರಿದ ರಾಣಿ ಅಬ್ಬಕ್ಕದೇವಿಯ ಸಾಹಸ ಚರಿತ್ರೆ ನಮ್ಮೆಲ್ಲರಿಗೂ ಸ್ಪೂರ್ತಿ ಎಂದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಡಿ.ಕರಿಯಣ್ಣ, ಡಾ.ಜೆ.ತಿಪ್ಪೇಸ್ವಾಮಿ, ಉಮೇಶ್, ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ