.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಡುವೆ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಮಹಿಳೆಯರಿಗೆ ಸಾಲ ನೀಡಿ ಅವರನ್ನು ಸ್ವಾವಲಂಬಿಗಳಾಗಲು ಉತ್ತೇಜನೆ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.ತಾಲೂಕಿನ ಹುಲಿಬೆಲೆ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಹೀರೆಕೆರೆ ಕೆರೆ ಅಭಿವೃದ್ಧಿ ಸಮಿತಿ ಸಂಯುಕ್ತಾಶ್ರಯದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಗ್ರಾಮದ ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಮಾಡಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಮೀಟರ್ ಬಡ್ಡಿ ದರದಲ್ಲಿ ರೈತರನ್ನು ಶೋಷಣೆ ಮಾಡುತ್ತಿರುವುದರಿಂದ ರೈತರ ಬದುಕು ಮೂರಾಬಟ್ಟೆಯಾಗಿದೆ ಎಂದರು.
ಡಿಸಿಸಿಯಿಂದ ಸಾಲ: ಭರವಸೆಡಿಸಿಸಿ ಬ್ಯಾಂಕಿನ ವತಿಯಿಂದ ರೈತರು,ಮಹಿಳೆಯರಿಗೆ ಬಡ್ಡಿ ಇಲ್ಲದೆ ಸಾಲ ಕೊಡಲಾಗುತ್ತಿತ್ತು, ಆದರೆ ಬ್ಯಾಂಕಿನ ಚುನಾವಣೆ ನಡೆಯದ ಕಾರಣ ಸಾಲ ವಿತರಣೆಗೆ ತೊಂದರೆಯಾಗಿದೆ. ಇಷ್ಟರಲ್ಲೆ ಮತ್ತೆ ಸಾಲ ಸೌಲಭ್ಯಗಳ ಕೊಡುವೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಧಗ್ರಾ ಯೋಜನೆ ಗ್ರಾಮೀಣರ ಬದುಕಿಗೆ ಆಶ್ರಯವಾಗಿದೆ. ಬ್ಯಾಂಕಿಗಿಂತಲೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಲಾಗುತ್ತಿದೆ ಇದಲ್ಲದೆ ಹಲವು ಸಮಾಜ ಸೇವೆಯಲ್ಲಿಯೂ ತೊಡಗಿದೆ. ಇಂತಹ ಸಂಸ್ಥೆಯಲ್ಲಿ ಮತ್ತಷ್ಟು ಉತ್ತೇಜಿಸಬೇಕು ಎಂದರು.
ಉಪಕಾರ ಮಾಡಿವರನ್ನು ಬೆಂಬಲಿಸಿ