ಟ್ರಾಮಾ ಕೇರ್ ಸೆಂಟರ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ದಿನೇಶ್ ಗುಂಡೂರಾವ್

KannadaprabhaNewsNetwork |  
Published : May 07, 2025, 12:50 AM IST
ಪೋಟೋ 11 : ದಾಬಸ್‍ಪೇಟೆ ಪಟ್ಟಣದ ಹೃದಯಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಆರೋಗ್ಯ ಸಚಿವರಿಗೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇನು. ತಾಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಗಳಿಗೆ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರದಲ್ಲೇ 100 ಹಾಸಿಗೆಯ ತಾಲೂಕು ಆಸ್ಪತ್ರೆಯ ನಿರ್ಮಾಣದ ಕನಸು ನನಸಾಗಲಿದೆ.

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಪಟ್ಟಣದ ಹೃದಯಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಪಘಾತ ಆರೈಕೆ ಕೇಂದ್ರ (ಟ್ರಾಮಾ ಕೇರ್ ಸೆಂಟರ್)ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಸಮುದಾಯ ಆರೋಗ್ಯ ಕೇಂದ್ರ ಮಾಡುವಂತೆ ಒತ್ತಾಯ:

ಹೋಬಳಿ ಕೇಂದ್ರ ದಾಬಸ್‍ಪೇಟೆಯಲ್ಲಿ ಲಕ್ಷಾಂತರ ಜನ ವಾಸಿಸುತ್ತಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆರಿಸುವಂತೆ ಶಾಸಕರು ಹಾಗೂ ಮುಖಂಡರು, ಸ್ಥಳೀಯರು ಮನವಿ ಮಾಡಿದ್ದಕ್ಕೆ ಶಾಸಕರು ಈ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅನುಕೂಲ ಮಾಡಿಕೊಡುತ್ತೇನೆ ಎಂದರು.

ಟ್ರಾಮಾ ಸೆಂಟರ್ ಗೆ ಶೀಘ್ರದಲ್ಲೇ ಉಪಕರಣ:

ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ಕಳೆದ ಎರಡು ವರ್ಷಗಳ ಹಿಂದೆ ಉದ್ಘಾಟನೆಯಾಗಿರುವ ಟ್ರಾಮಾ ಸೆಂಟರ್ ಗೆ ವೈದ್ಯರು ಹಾಗೂ ಉಪಕರಣಗಳು ಇಲ್ಲದ ಬಗ್ಗೆ ತಿಳಿಸಿದಾಗ ತಕ್ಷಣ ಆರೋಗ್ಯ ಇಲಾಖೆಯ ಕಮಿಷನರ್ ಗೆ ಕರೆ ಮಾಡಿ ಆರ್ಥಿಕ ಇಲಾಖೆಯ ಜೊತೆ ಚರ್ಚಿಸಿ ಅಗತ್ಯ ಉಪಕರಣಗಳನ್ನು ಒದಗಿಸುವಂತೆ ಸಚಿವರು ತಿಳಿಸಿದರು.

ನಂತರ ಮಾಧ್ಯಮದವರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಈ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆಯ ತರಾತುರಿಯಲ್ಲಿ ಟ್ರಾಮಾ ಸೆಂಟರ್ ನ್ನು ಉದ್ಘಾಟನೆ ಮಾಡಿದ್ದಾರೆ. ಆದರೆ ಉಪಕರಣಗಳನ್ನು ಅಳವಡಿಸಿಲ್ಲ ಹಾಗೂ ವೈದ್ಯರನ್ನು ನಿಯೋಜನೆ ಮಾಡಿಲ್ಲ, ಇದೀಗ ಶಾಸಕರು ಗಮನಕ್ಕೆ ತಂದಿದ್ದು ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮವಹಿಸುತ್ತೇನೆ ಎಂದರು.

ಬಾಕ್ಸ್.......

ಈ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್ ಶಾಸಕರಾದ ಮೇಲೆ ತಾಲೂಕಿಗೆ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಅನೇಕ ಬಾರಿ ನನ್ನನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಶಾಸಕರು ಗೆದ್ದಮೇಲೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಇಂತಹ ಶಾಸಕರಿಗೆ ನೀವು ಸಹಕಾರ ನೀಡಬೇಕು ಎಂದು ಸಚಿವರು ತಿಳಿಸಿದರು.

ಕೋಟ್

ಆರೋಗ್ಯ ಸಚಿವರಿಗೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇನು. ತಾಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಗಳಿಗೆ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರದಲ್ಲೇ 100 ಹಾಸಿಗೆಯ ತಾಲೂಕು ಆಸ್ಪತ್ರೆಯ ನಿರ್ಮಾಣದ ಕನಸು ನನಸಾಗಲಿದೆ.

ಎನ್.ಶ್ರೀನಿವಾಸ್, ಶಾಸಕರು

ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ, ವೈದ್ಯ ಡಾ.ಚೇತನ್, ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಅಂಚೆಮನೆ ಪ್ರಕಾಶ್, ವನಿತ, ಶಿವಕುಮಾರ್, ಚಂದ್ರಣ್ಣ ಹೊಸಳಯ್ಯ, ಸಿದ್ದರಾಮು, ಸಿದ್ದರಾಜು, ಖಲೀಂಉಲ್ಲಾ, ದಿನೇಶ್ ನಾಯಕ್, ವೆಂಟಕಾಚಲಯ್ಯ, ಆನಂದ್, ನಾರಾಯಣಸ್ವಾಮಿ, ಚಂದ್ರಶೇಖರ್, ಸುರೇಶ್, ಜಗದೀಶ್, ಚಿಕ್ಕಣ್ಣ, ಅಜ್ಜೇಗೌಡ ಸೇರಿ ನೂರಾರು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ