ದಾಖಲೆರಹಿತ ವಸತಿ ಪ್ರದೇಶ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ

KannadaprabhaNewsNetwork |  
Published : Apr 21, 2025, 12:56 AM IST
ಕ್ಯಾಪ್ಷನ20ಕೆಡಿವಿಜಿ31, 32ಮಾಯಕೊಂಡ ಕ್ಷೇತ್ರದ ಕತ್ತಲಗೆರೆ ಗ್ರಾಪಂ ವ್ಯಾಪ್ತಿಯ ಕವಳಿತಾಂಡ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ದಾಖಲೆರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿ ಇತ್ಯಾದಿಗಳನ್ನು ಗುರುತಿಸಿ, ಹೊಸ ಕಂದಾಯ ಗ್ರಾಮ ಹಾಗೂ ಉಪ ಗ್ರಾಮಗಳೆಂದು ಘೋಷಿಸಿದೆ. ಅಲ್ಲಿನ ನಿವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

- ಕವಳಿ ತಾಂಡದಲ್ಲಿ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್‌. ಬಸವಂತಪ್ಪ ಭರವಸೆ । ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾಖಲೆರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿ ಇತ್ಯಾದಿಗಳನ್ನು ಗುರುತಿಸಿ, ಹೊಸ ಕಂದಾಯ ಗ್ರಾಮ ಹಾಗೂ ಉಪ ಗ್ರಾಮಗಳೆಂದು ಘೋಷಿಸಿದೆ. ಅಲ್ಲಿನ ನಿವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ಕತ್ತಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಳಿತಾಂಡ ಗ್ರಾಮದಲ್ಲಿ ಭಾನುವಾರ 2019-20ನೇ ಸಾಲಿನ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಿರುವ ₹12 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ದಾಖಲೆರಹಿತ ಜನವಸತಿ ಪ್ರದೇಶದಲ್ಲಿ ವಾಸಿಸುವ ಜನರು ಸರ್ಕಾರದ ಯಾವುದೇ ಸೌಲಭ್ಯಗಳು ಇಲ್ಲದೇ ನಿಕೃಷ್ಟ ಜೀವನ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಈಗಾಗಲೇ ಘೋಷಣೆ ಮಾಡಿದ್ದಾರೆ. ಇನ್ನು 15ರಿಂದ 20 ದಿವಸದೊಳಗೆ ರಾಜ್ಯಮಟ್ಟದಲ್ಲಿ ಹಕ್ಕುಪತ್ರ ವಿತರಣೆ ಮಾಡಿ, ಉಳಿದ ಎಲ್ಲ ದಾಖಲೆರಹಿತ ಜನವಸತಿ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಲಿದ್ದಾರೆ ಎಂದು ಭರವಸೆ ನೀಡಿದರು.

ದಾಖಲೆರಹಿತ ಜನವಸತಿ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ಇಲ್ಲದೇ ಇ-ಸ್ವತ್ತು, ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಮಸ್ಯೆ ಆಗುತ್ತಿದೆ. ಈ ಸಮಸ್ಯೆಗೆ ಮುಕ್ತಿ ನೀಡಲು ಸರ್ಕಾರ ಕಂದಾಯ ಗ್ರಾಮಗಳನ್ನಾಗಿಸಲು ಕ್ರಮ ತೆಗೆದುಕೊಂಡಿದೆ. ಹಕ್ಕುಪತ್ರ ದೊರೆತ ಬಳಿಕ ಇ-ಸ್ವತ್ತು, ಸರ್ಕಾರಿ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ ಎಂದರು.

ಸರ್ಕಾರ ಕಂದಾಯ ಗ್ರಾಮ ಘೋಷಿಸಿದ್ದರೂ ನಮಗೆ ಇನ್ನೂ ಹಕ್ಕುಪತ್ರ ನೀಡಿಲ್ಲ ಎಂದು ಕವಳಿತಾಂಡ ನಿವಾಸಿಗಳು ಶಾಸಕರನ್ನು ಪ್ರಶ್ನಿಸಿದರು. ಆಗ ಶಾಸಕರು ಕೂಡಲೇ ತಹಸೀಲ್ದಾರ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಸರ್ಕಾರ ಕಂದಾಯ ಘೋಷಿಸಿದ್ದು, ಈ ಭಾಗದ ಜನರಿಗೆ ಹಕ್ಕುಪತ್ರ ಏಕೆ ಕೊಟ್ಟಿಲ್ಲ ಎಂದು ವಿಚಾರಿಸಿದರು. ಹಕ್ಕುಪತ್ರ ಕೊಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ರಾಜ್ಯಮಟ್ಟದಲ್ಲಿ ಕಾರ‍್ಯಕ್ರಮ ಮುಗಿದ ಕೂಡಲೇ ವಿತರಿಸುತ್ತೇವೆ ಎಂದು ತಹಸೀಲ್ದಾರ್‌ ಮಾಹಿತಿ ನೀಡಿದರು. ದೂರವಾಣಿ ಸಂಭಾಷಣೆ ವೇಳೆ ಮೈಕ್ ಬಳಿ ಮೊಬೈಲ್ ಹಿಡಿದು ಜನರಿಗೆ ಸ್ಪಷ್ಟಪಡಿಸಿದ್ದು ಗಮನ ಸೆಳೆಯಿತು.

ಶುದ್ಧ ನೀರಿನ ಘಟಕ ನಿರ್ವಹಣೆ ಬಹಳ ಮುಖ್ಯ:

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವುದು ಎಷ್ಟು ಮುಖ್ಯವೋ, ಅವುಗಳ ಸೂಕ್ತ ನಿರ್ವಹಣೆಯೂ ಅಷ್ಟೇ ಮುಖ್ಯ. ಧರ್ಮಸ್ಥಳ ಸಂಘದವರು ನಿರ್ವಹಣೆ ಮಾಡಿದಂತೆ ಗ್ರಾಮ ಪಂಚಾಯಿತಿ ಕೂಡ ಅದೇ ರೀತಿಯಾಗಿ ನಿರ್ವಹಣೆ ಮಾಡಬೇಕು. ಕ್ಷೇತ್ರದ ವ್ಯಾಪ್ತಿಯ ಕೆಲವೆಡೆ ಗುತ್ತಿಗೆದಾರರ ನಿರ್ವಹಣೆ ಇಲ್ಲದೇ ನೀರು ಶುದ್ಧೀಕರಿಸದೇ ನೇರವಾಗಿ ವಿತರಿಸಲಾಗುತ್ತಿದೆ. ಈ ರೀತಿ ಆಗಬಾರದು. ಘಟಕವನ್ನು ಸರಿಯಾಗಿ ನಿರ್ವಹಣೆ ಮಾಡುವ ಮೂಲಕ ಜನರಿಗೆ ಶುದ್ಧ ನೀರು ಪೂರಸಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭ ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ತಿಪ್ಪಣ್ಣ, ರೈತ ಮುಖಂಡರಾದ ತೇಜಸ್ವಿ ಪಟೇಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜಣ್ಣ, ಗ್ರಾಪಂ ಪಿಡಿಒ ಯಶೋಧಮ್ಮ, ಗ್ರಾಮದ ಮುಖಂಡರಾದ ಶಶಿಕುಮಾರ್ ಲೋಕೇಶ್ ನಾಯ್ಕ್, ಹನುಮಂತ ನಾಯ್ಕ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

- - -

-20ಕೆಡಿವಿಜಿ31, 32:

ಮಾಯಕೊಂಡ ಕ್ಷೇತ್ರದ ಕತ್ತಲಗೆರೆ ಗ್ರಾಪಂ ವ್ಯಾಪ್ತಿಯ ಕವಳಿತಾಂಡ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಕೆ.ಎಸ್. ಬಸವಂತಪ್ಪ ಉದ್ಘಾಟಿಸಿದ

ರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು