ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿರುವ ಬಗ್ಗೆ ತಾಲೂಕು ಕಚೇರಿ ಮುಂಭಾಗ ಶುಕ್ರವಾರ ನಡೆಯುತ್ತಿದ್ದ ಬಿಜೆಪಿ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ಭೇಟಿ ನೀಡಿದ ಅಶೋಕ್ ಅನಾವಶ್ಯಕ ಗೊಂದಲಗಳಿಗೆ ಎಡೆ ಮಾಡಬೇಡಿ. ರಾಜ್ಯದ ಯಾವುದೇ ಕಡೆ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಮಾಡಲು ಅವಕಾಶ ಇದುವರೆಗೆ ಕಲ್ಪಿಸಿಲ್ಲ. ಈ ರೀತಿ ನೀಡಿದಲ್ಲಿ ಇಡೀ ರಾಜ್ಯದಲ್ಲಿ ಅಧಿಕಾರ ಮಾಡುವ ಸರ್ಕಾರಕ್ಕೆ ಎಲ್ಲ ಸ್ಥಳೀಯ ಸಂಸ್ಥೆಗಳ ಅಧಿಕಾರ ಲಭ್ಯವಾಗಲಿದೆ ಎಂದರು.
ಕೆಟ್ಟ ಪರಂಪರೆ ಸೃಷ್ಟಿಸಬೇಡಿ. ಅನಾಹುತಕ್ಕೆ ದಾರಿ ಮಾಡಬೇಡಿ. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳಿಗೆ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಅವಕಾಶ ಇರುವುದಿಲ್ಲ ಎಂದ ಆರ್. ಅಶೋಕ್ , ತಕ್ಷಣ ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಸರಿಪಡಿಸುವಂತೆ ಸೂಚನೆ ನೀಡಿದರು.