ಕನ್ನಡಪ್ರಭ ವಾರ್ತೆ ಮೈಸೂರು
ಪಿರಿಯಾಪಟ್ಟಣ ಮಾಜಿ ಶಾಸಕ ಕೆ. ಮಹದೇವ್ ಅವರ ಪುತ್ರ ಪಿ.ಎಂ. ಪ್ರಸನ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಗರದ ಆಲನಹಳ್ಳಿಯಲ್ಲಿನ ಮೆಗಾ ಡೈರಿಯಲ್ಲಿ ಬುಧವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಟಿ. ನರಸೀಪುರ ತಾಲೂರು ಪ್ರತಿನಿಧಿಸುವ ಆರ್. ಚಲುವರಾಜು ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.
12 ಗಂಟೆಯೊಳಗೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಲ್ಗೊಂಡಿದ್ದ ಉಪ ವಿಭಾಗಾಧಿಕಾರಿ ಕೆ.ಆರ್. ರಕ್ಷಿತ್ ನಾಮಪತ್ರ ಪರಿಶೀಲನೆ ನಡೆಸಿ ಕ್ರಮಬದ್ಧವಾಗಿದ್ದ ಹಿನ್ನೆಲೆಯಲ್ಲಿ ಆರ್. ಚಲುವರಾಜು ಅವರನ್ನು ಅಧಿಕೃತವಾಗಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದನ್ನು ಘೋಷಿಸಿದರು.ಬಳಿಕ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ನಾಯಕ್ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು. ನಿರ್ದೇಶಕರಾದ
ವಿಜಯೋತ್ಸವ
ಬನ್ನೂರು, ಟಿ. ನರಸೀಪುರ, ಎಚ್.ಡಿ. ಕೋಟೆ, ವರುಣ, ನಂಜನಗೂಡು ಭಾಗದಿಂದ ಬಂದಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಸದಸ್ಯರು, ಬೆಂಬಲಿಗರು ಬೃಹತ್ ಗಾತ್ರದ ಹೂವಿನ ಹಾರ ಹಾಗಿ ಅಭಿನಂದಿಸಿ ಶುಭ ಕೋರಿದರು. ಕೆಲವರು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು.
ಅಧಿಕಾರ ಹಂಚಿಕೆಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದ ಮೂವರನ್ನು ಸಿಎಂ ಸಿದ್ದರಾಮಯ್ಯ ಸಮಾಧಾನಪಡಿಸಿದ್ದಾರೆ.
ಎಲ್ಲರಿಗೂ ಅಭಾರಿ
ನನ್ನ ಅವಿರೋಧ ಆಯ್ಕೆಗೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರಾದ ಜಿ.ಟಿ. ದೇವೇಗೌಡ, ಜಿ.ಡಿ. ಹರೀಶ್ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಹಾಗೂ ಹಾಲು ಉತ್ಪಾದಕರ ಹಿತ ಕಾಪಾಡುವುದಾಗಿ ಚಲುವರಾಜು ತಿಳಿಸಿದ್ದಾರೆ.