ಕನ್ನಡಪ್ರಭ ವಾರ್ತೆ ಧಾರವಾಡರವೀಂದ್ರನಾಥ ಠಾಕೂರ್ ಭಾರತದ ಸಾಂಸ್ಕೃತಿಕ ಪುನರುಜ್ಜೀವನದ ಮಹಾನ್ ವ್ಯಕ್ತಿ. ಅವರು ದೇಶ, ಕಾಲ ಮೀರಿದ ಸೃಜನಶೀಲ ಕವಿಗಳು ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರಹ್ಲಾದ ನರೇಗಲ್ ಮಾಸ್ತರರ ದತ್ತಿ ನಿಮಿತ್ತ ಆಯೋಜಿಸಿದ್ದ ‘ಗುರುದೇವ ರವೀಂದ್ರನಾಥ ಠಾಕೂರ್ ಜನ್ಮದಿನಾಚರಣೆ ಹಾಗೂ ಉಪನ್ಯಾಸ’ ಕಾರ್ಯಕ್ರಮದಲ್ಲಿ ‘ರವೀಂದ್ರನಾಥ ಠಾಕೂರ ದಾರ್ಶನಿಕ ಲೇಖಕರು’ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಕವಿ ರವೀಂದ್ರನಾಥರು ಬಹುಮುಖ ವ್ಯಕ್ತಿತ್ವ ಉಳ್ಳ ಮೇರು ಕವಿಗಳು. ಸಾಹಿತಿಗಳಾಗಿ, ತತ್ವಜ್ಞಾನಿಗಳಾಗಿ, ಶಿಕ್ಷಣ ತಜ್ಞರಾಗಿ, ಕಲಾವಿದರಾಗಿ, ಕಥೆಗಾರರಾಗಿ ಮಾತ್ರವಲ್ಲ ಓರ್ವ ಪ್ರಸಿದ್ಧ ಸಂಗೀತ ಸಂಯೋಜಕರೂ ಆಗಿದ್ದರು. ಅವರ ಗೀತಾಂಜಲಿ ಕೃತಿಗೆ 1913 ರಲ್ಲಿ ನೊಬೆಲ್ ಪುರಸ್ಕಾರ ದೊರೆಯಿತು. ಕವಿ ರವೀಂದ್ರನಾಥ ಠಾಕೂರರು ನೊಬೆಲ್ ಪುರಸ್ಕಾರ ಪಡೆದ ಏಷ್ಯಾದ ಮೊದಲಿಗರು. ಬಾಂಗ್ಲಾ ಹಾಗೂ ಶ್ರೀಲಂಕಾ ದೇಶಕ್ಕೂ ರಾಷ್ಟçಗೀತೆ ರಚಿಸಿಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ. ಜಿನದತ್ತ ಹಡಗಲಿ ಮಾತನಾಡಿದರು. ಡಾ. ಧನವಂತ ಹಾಜವಗೋಳ ಸ್ವಾಗತಿಸಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಎಂ.ಎಸ್. ನರೇಗಲ್ ವಂದಿಸಿದರು.