ಬಿಂದು ಸತೀಶ್ ಸ್ಥಾನಕ್ಕೆ ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆ
ತಾಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ರಚಿತಾ ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೆಣಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಬಿಂದು ಸತೀಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಸಾಮಾನ್ಯ ಮಹಿಳಾ ಸ್ಥಾನಕ್ಕಾಗಿ ರಚಿತಾ ರಮೇಶ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ರಚಿತಾ ರಮೇಶ್ ಅವರು ಮೆಣಸೂರು ಗ್ರಾ.ಪಂ. ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಬಿಇಒ ಕೆ.ಆರ್.ಪುಷ್ಪಾ ಘೋಷಿಸಿದರು.ಈ ಸಂದರ್ಭದಲ್ಲಿ ಗ್ರಾಪಂ ಪಿಡಿಓ ಸಂತೋಷ್ಕುಮಾರ್, ಕಾರ್ಯದರ್ಶಿ ಪ್ರಸನ್ನಕುಮಾರ್ ಇದ್ದರು.
ಬಿಜೆಪಿ ಮಹಿಳಾ ಘಟಕದ ತಾಲೂಕು ಆಧ್ಯಕ್ಷೆ ರಶ್ಮಿ ದಯಾನಂದ್ ಮಾತನಾಡಿ, ಬಿಜೆಪಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೆಣಸೂರು ಗ್ರಾಮಪಂಚಾಯ್ತಿಯಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರೂ ಮಹಿಳೆಯರೇ ಆಗಿದ್ದಾರೆ. ಪಕ್ಷ ನಮಗೆ ನೀಡಿದಂತಹ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ದೊರೆತ ಅಧಿಕಾರವಧಿಯಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನಮಗೆ ಅವಕಾಶವನ್ನು ಕಲ್ಪಿಸಿಕೊಟ್ಟ ಪಕ್ಷಕ್ಕೂ, ನಮಗೆ ಮತ ನೀಡಿದ ಮತದಾರರಿಗೂ ಗೌರವ ತರುವಂತೆ ಸೇವೆ ಸಲ್ಲಿಸಬೇಕೆಂದರು.
ಈ ಸಂರ್ಭದಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಪಚ್ಚೆಯಮ್ಮ, ಸದಸ್ಯರಾದ ಡಿ.ಆರ್.ಶ್ರೀನಾಥ್, ಎನ್.ಡಿ.ಪ್ರಸಾದ್, ಅಣ್ಣಪ್ಪ, ಎಂ.ಟಿ.ಪ್ರವೀಣ್, ಬಿನು,ಶಿಲ್ಪಾ, ಉಮಾಗಂಗಾಧರ್, ಯಾಸ್ಮೀನ್, ಬಿಜೆಪಿ ಪಕ್ಷದ ಮುಖಂಡರಾದ ಕೆ.ಎಂ.ಜಗದೀಶ್, ಅನಿಲ್, ಮೂಡಬಾಗಿಲುಚಂದ್ರು ಮತ್ತಿತರರು ಉಪಸ್ಥಿತರಿದ್ದರು.