ಗುಮ್ಮನಹಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ರಾಧ ಸೋಮರಾಜು ಆಯ್ಕೆ

KannadaprabhaNewsNetwork |  
Published : Jan 28, 2025, 12:50 AM IST
27ಕೆಎಂಎನ್ ಡಿ17 | Kannada Prabha

ಸಾರಾಂಶ

ಹಿಂದಿನ ಉಪಾಧ್ಯಕ್ಷೆ ಅನಿತ ಎ.ಬಿ.ಅವರನ್ನು ಎಲ್ಲಾ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಉಪಾಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸಿದ್ದರಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ರಾಧ ಸೋಮರಾಜು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಗುಮ್ಮನಹಳ್ಳಿ-ರಾಗಿಮುದ್ದನಹಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಾಧ ಸೋಮರಾಜು ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಉಪಾಧ್ಯಕ್ಷೆ ಅನಿತ ಎ.ಬಿ.ಅವರನ್ನು ಎಲ್ಲಾ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಉಪಾಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸಿದ್ದರಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ರಾಧ ಸೋಮರಾಜು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಹೇಮಾವತಿ ನೀರಾವರಿ ನಿಗಮದ ಎಇಇ ಪುಟ್ಟಮಾಯಿಗೌಡ ಘೋಷಿಸಿದರು.

ನೂತನ ಉಪಾಧ್ಯಕ್ಷೆ ರಾಧ ಸೋಮರಾಜು ಆಯ್ಕೆಯಾಗುತ್ತಿದ್ದಂತೆ ಜೆಡಿಎಸ್ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ಎಲ್ಲಾ ಸದಸ್ಯರು, ಮುಖಂಡರು, ಬೆಂಬಲಿಗರು ನೂತನ ಉಪಾಧ್ಯಕ್ಷೆಯನ್ನು ಅಭಿನಂದಿಸಿದರು.

ಜೆಡಿಎಸ್ ಮುಖಂಡ ಎಂ.ಎನ್.ಶಿವಣ್ಣ ಮಾತನಾಡಿ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರ ಸೂಚನೆಯಂತೆ ಉಪಾಧ್ಯಕ್ಷೆ ಸ್ಥಾನ ಸ್ಪರ್ಧಿಸಿದ್ದ ರಾಧ ಸೋಮರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಈ ವೇಳೆ ಗ್ರಾಪಂನ ಅಧ್ಯಕ್ಷ ಎಂ.ಎಸ್.ರಘು, ಮಾಜಿ ಅಧ್ಯಕ್ಷರಾದ ರಾಜೇಗೌಡ, ಆರ್.ಎನ್.ಭವಾನಿ ಸುನೀಲ್‌ಕುಮಾರ್, ಮಾಜಿ ಉಪಾಧ್ಯಕ್ಷರಾದ ಜಿ.ಎನ್.ಶ್ರೀನಿವಾಸ್, ವರದರಾಜು, ಸದಸ್ಯರಾದ ಅಶ್ವಿನಿ, ಆರ್.ಜಯರಾಮು, ನಾಗಮ್ಮ, ಪಿಡಿಓ ರಮೇಶ್, ಮುಖಂಡರಾದ ಆರ್.ಜೆ.ಗುರುದೇವ್, ಎ.ಸೋಮು, ಎಂ.ಜೆ.ಜಗದೀಶ್, ಆರ್.ಎಂ.ಪುಟ್ಟರಾಜು, ಎಂ.ಮಾದೇಗೌಡ, ಬಿ.ಪಿ.ಶಿವಕುಮಾರ್, ಆರ್.ಶಂಕರ್, ಚಿಕ್ಕಬೆಟ್ಟೇಗೌಡ, ಪುರುಷೋತ್ತಮ್, ಎಂ.ಸಿ.ರಾಜು, ಪರಮೇಶ್, ಪಾರ್ಥ, ರಾಜು ಸೇರಿದಂತೆ ಹಲವರು ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ