ಬೀಡಾಡಿ ದನಗಳಿಗೆ ರೇಡಿಯಂ ಕಾಲರ್

KannadaprabhaNewsNetwork |  
Published : Jan 08, 2026, 02:00 AM IST
ನರಸಿಂಹರಾಜಪುರ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚ, ಬಜರಂಗದಳದ ಕಾರ್ಯಕರ್ತರು ಬೀಡಾಡಿ ದನಗಳಿಗೆ ರೇಡಿಯಂ ಕಾಲರ್ ಅಳವಡಿಸಿದರು. | Kannada Prabha

ಸಾರಾಂಶ

ಬಿಜೆಪಿ ಯುವ ಮೋರ್ಚಾ, ಬಜರಂಗದಳ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರಸ್ತೆಯಲ್ಲಿ ಓಡಾಡುತ್ತಿರುವ ಬೀಡಾಡಿ ದನಗಳಿಗೆ ರೇಡಿಯಂ ಕಾಲರ್ ಅಳವಡಿಸುವ ಕಾರ್ಯಾಚರಣೆ ಸೋಮವಾರ ರಾತ್ರಿ ನಡೆಯಿತು.

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಬಿಜೆಪಿ ಯುವ ಮೋರ್ಚಾ, ಬಜರಂಗದಳ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರಸ್ತೆಯಲ್ಲಿ ಓಡಾಡುತ್ತಿರುವ ಬೀಡಾಡಿ ದನಗಳಿಗೆ ರೇಡಿಯಂ ಕಾಲರ್ ಅಳವಡಿಸುವ ಕಾರ್ಯಾಚರಣೆ ಸೋಮವಾರ ರಾತ್ರಿ ನಡೆಯಿತು.

ನರಸಿಂಹರಾಜಪುರ ಪಟ್ಟಣದ ಅಂಬೇಡ್ಕರ್ ವೃತ್ತ, ನಾಗಲಾಪುರ ಗ್ರಾಮದ ಮುಂಡೊಳ್ಳಿ, ಹೊಸಕೆರೆ, ಹೊನ್ನೇಕೊಡಿಗೆ ಗ್ರಾಮ ಪಂಚಾಯಿತಿಯ ವರ್ಕಾಟೆ, ಹಂತುವಾನಿ ಮುಂತಾದ ಕಡೆ ಬಿಜೆಪಿ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಪ್ರೀತಂ ನೇತೃತ್ವದಲ್ಲಿ ಬಿಜೆಪಿ ನಗರ ಅಧ್ಯಕ್ಷ ಸುರಭಿ ರಾಜೇಂದ್ರ, ಬಿಜೆಪಿ ಮುಖಂಡರಾದ ಕೆ.ಟಿ.ಮಂಜುನಾಥ್, ದ್ವಾರಮಕ್ಕಿ ಅಶ್ವನ್, ಯುವ ಮೋರ್ಚಾದ ಪ್ರಸಾದ್ ಸೇರಿದಂತೆ 15ಕ್ಕೂ ಹೆಚ್ಚು ಬಿಜೆಪಿ, ಬಜರಂಗದಳದ ಮುಖಂಡರು, ಕಾರ್ಯಕರ್ತರು ಸೇರಿ ಕಾರ್ಯಾಚರಣೆ ನಡೆಸಿ ಒಟ್ಟು 23 ದನಗಳಿಗೆ ಕಾಲರ್ ಅಳವಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರೀತಂ ಸುದ್ದಿಗಾರರೊಂದಿಗೆ ಮಾಹಿತಿ ನೀಡಿ, ರಾತ್ರಿ ಸಮಯದಲ್ಲಿ ವಾಹನ ಓಡಿಸುವಾಗ ಹಸುಗಳು ಕಾಣದೆ ಅಪಘಾತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಡಿ.ಎನ್‌.ಜೀವರಾಜ್ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಹಸುಗಳಿಗೆ ರೇಡಿಯಂ ಕಾಲರ್ ಅಳವಡಿಸಿದ್ದೇವೆ. ಇದರಿಂದ ವಾಹನಗಳ ಬೆಳಕು ಬಿದ್ದಾಗ ಹಸುಗಳು ಗೋಚರವಾಗಿ ಅಪಘಾತ ತಪ್ಪಲಿದೆ. ಮುಂದಿನ ದಿನಗಳಲ್ಲಿ ಶೃಂಗೇರಿ ಕ್ಷೇತ್ರದ ಎಲ್ಲಾ ಕಡೆ ಬಿಜಿಪಿ, ಬಜರಂಗದಳ ಹಾಗೂ ಸಂಘ ಪರಿವಾರದ ಸಹಕಾರದೊಂದಿಗೆ ಹಸುಗಳಿಗೆ ರೇಡಿಯಂ ಕಾಲರ್ ಅಳಡಿಸುವ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ