ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸೋಮವಾರ ಜಿಲ್ಲೆಯ ವಿವಿಧೆಡೆ ಉತ್ತರಾರಾಧನೆ ಹಾಗೂ ಮಹಾ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.
ಶಿವಮೊಗ್ಗ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸೋಮವಾರ ಜಿಲ್ಲೆಯ ವಿವಿಧೆಡೆ ಉತ್ತರಾರಾಧನೆ ಹಾಗೂ ಮಹಾ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.
ಆರಾಧನೆಯ ಅಂತಿಮ ದಿನವೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಶಿವಮೊಗ್ಗ ತಿಲಕ್ ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳಗ್ಗೆಯಿಂದಲೇ ರಾಯರಿಗೆ ಅಷ್ಟೋತ್ತರ ಅಭಿಷೇಕ, ಉಯ್ಯಾಲೆ ಸೇವೆ, ಸರ್ವ ಸೇವೆ, ಮಹಾ ಪೂಜೆ, ಬೆಳ್ಳಿ ರಥೋತ್ಸವ ಸೇವೆ, ಅಷ್ಟಾವಧಾನ ಸೇವೆಗಳು ನೆರವೇರಿದವು.
ಮಹಾರಥೋತ್ಸವದಲ್ಲಿ ನೂರಾರು ಮಂದಿ ಪಾಲ್ಗೊಂಡು ತೇರನ್ನೆಳೆದು ಧನ್ಯತಾಭಾವ ಹೊಂದಿದರು. ರಾಯರ ಆರಾಧನೆ ಪ್ರಯುಕ್ತ ವಿವಿಧ ಭಜನಾ ತಂಡಗಳು ಹಾಗೂ ಭಕ್ತಾದಿಗಳು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಸಾವಿರಾರು ಭಕ್ತರು ರಾಯರ ದರ್ಶನ ಪಡೆದರು. ಭಾನುವಾರ ಸಂಸದ ಬಿ.ವೈ.ರಾಘವೇಂದ್ರ ತಿಲಕ್ ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಠದ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.