ಕೊಪ್ಪಳ: ನಗರದ ರೈಲ್ವೆ ನಿಲ್ದಾಣದ ಬಳಿಯ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಮಠದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ 355ನೇ ರಾಯರ ಆರಾಧನಾ ಮಹೋತ್ಸವ ಸೋಮವಾರ ವೈಭವದ ಉತ್ತರಾರಾಧನೆ ಹಾಗೂ ಮಹಾರಥೋತ್ಸವದೊಂದಿಗೆ ಸಂಪನ್ನಗೊಂಡಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಾಯರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪುನೀತರಾದರು. ಮಠದಲ್ಲಿ ಬೆಳಗ್ಗಿನಿಂದಲೇ ಭಕ್ತರ ದಂಡು ಕಂಡುಬಂದಿದ್ದು, ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತರು ಶ್ರದ್ಧೆಯಿಂದ ಭಾಗವಹಿಸಿದರು.
ಸಂಜೆ ಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕ್ ಅವರ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಭಕ್ತಿಗೀತೆಗಳ ಮೂಲಕ ಅವರು ನೆರೆದಿದ್ದ ಭಕ್ತರನ್ನು ಭಕ್ತಿಭಾವದಲ್ಲಿ ತೇಲಿಸಿದರು. ಬಳಿಕ ಪಂ. ವೆಂಕಟನರಸಿಂಹಾಚಾರ್ಯ ಗುಡೆಬೆಲ್ಲೂರು ಅವರಿಂದ ಪ್ರವಚನ ಹಾಗೂ ಫಲಮಂತ್ರಾಕ್ಷತೆ ಕಾರ್ಯಕ್ರಮ ಜರುಗಿತು.ಉತ್ತರಾರಾಧನೆಯ ಅಂಗವಾಗಿ ಮಠಕ್ಕೆ ಆಗಮಿಸಿದ್ದ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ, ವಕೀಲ ರಾಘವೇಂದ್ರ ಪಾನಗಂಟಿ ಸೇರಿದಂತೆ ಹಲವು ಗಣ್ಯರು ರಾಯರ ದರ್ಶನ ಪಡೆದರು.
ಪೋಟೊ31.5
31.6