ಇಂದಿನಿಂದ ರಾಘವೇಂದ್ರರ 354ನೇ ಆರಾಧನಾ ಮಹೋತ್ಸವ

KannadaprabhaNewsNetwork |  
Published : Aug 10, 2025, 01:33 AM IST
ಪೊಟೋ ಪೈಲ್ : 9ಬಿಕೆಲ್2 | Kannada Prabha

ಸಾರಾಂಶ

ಆ.೧೧ರಂದು ಬೆಳಿಗ್ಗೆ ೭.೩೦ಕ್ಕೆ ದೇವತಾ ಪ್ರಾರ್ಥನೆ, ಭಕ್ತರ ಹಸ್ತದಿಂದ ಪಾದ್ಯಪೂಜೆ

ಭಟ್ಕಳ: ಪಟ್ಟಣದ ಮಾರುತಿ ನಗರದಲ್ಲಿರುವ "ಮನುಪ್ರಭು ಸಂಕಲ್ಪದ ರಾಘವೇಂದ್ರ ಮಠ " ದಲ್ಲಿ ರಾಘವೇಂದ್ರ ಸ್ವಾಮೀಜಿಯವರ ೩೫೪ನೇ ಆರಾಧನಾ ಮಹೋತ್ಸವವು ಆ.೧೦ರಿಂದ ಆ.೧೨ರತನಕ ವಿಜೃಂಭಣೆಯಿಂದ ನಡೆಯಲಿದೆ.

ಆರಾಧನಾ ಮಹೋತ್ಸವದ ಅಂಗವಾಗಿ ಪ್ರತಿದಿನ ದೇವತಾ ಪ್ರಾರ್ಥನೆ, ಭಕ್ತರಿಂದ ಹಸ್ತದಿಂದ ಸಾರ್ವಭೌಮರ ಪಾದ್ಯಪೂಜೆ, ವಿಶೇಷ ಪಂಚಾಮೃತ ಅಭಿಷೇಕ, ಮಹಾಪೂಜೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಆ.೧೦ರಂದು ಬೆಳಿಗ್ಗೆ ೮ ಗಂಟೆಗೆ ದೇವತಾ ಪ್ರಾರ್ಥನೆ, ೮.೩೦ರಿಂದ ೧೧ ಗಂಟೆಯ ತನಕ ಭಕ್ತರ ಹಸ್ತದಿಂದ ಶ್ರೀಗುರು ಸಾರ್ವಭೌಮರ ಪಾದ್ಯಪೂಜೆ ಹಾಗೂ ಸಾಮೂಹಿಕ ಸತ್ಯನಾರಾಯಣ ವೃಥ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಸಂಜೆ ೭ ಗಂಟೆಗೆ ಭಜನೆ ಹಾಗೂ ೮ ಗಂಟೆಗೆ ರಥೋತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಆ.೧೧ರಂದು ಬೆಳಿಗ್ಗೆ ೭.೩೦ಕ್ಕೆ ದೇವತಾ ಪ್ರಾರ್ಥನೆ, ಭಕ್ತರ ಹಸ್ತದಿಂದ ಪಾದ್ಯಪೂಜೆ, ೯ ಗಂಟೆಗೆ ವಿಶೇಷ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಅಖಂಡ ಭಜನೆ ಪ್ರಾರಂಭ, ಮಧ್ಯಾಹ್ನ ೧ ರಿಂದ ೩ ಗಂಟೆಯ ತನಕ ಮಹಾ ಅನ್ನಸಂತರ್ಪಣೆ, ರಾತ್ರಿ ೮ಕ್ಕೆ ರಥೋತ್ಸವ, ಮಹಾಪೂಜೆ, ಪ್ರಸಾದ ವಿತರಣೆ, ಆ.೧೨ ರಂದು ಬೆಳಿಗ್ಗೆ ೮ ಗಂಟೆಗೆ ದೇವತಾ ಪ್ರಾರ್ಥನೆ, ಭಕ್ತಾದಿಗಳ ಹಸ್ತದಿಂದ ಪಾದ್ಯಪೂಜೆ, ವಿಶೇಷ ಕ್ಷೀರಾಭಿಷೇಕ, ೧೦ ಗಂಟೆಯಿಂದ ಸಾಮೂಹಿಕ ಗಣಹೋಮ, ಮಧ್ಯಾಹ್ನ ೧೨.೩೦ ಗಂಟೆಗೆ ಮಹಾಪೂಜೆ, ಸಂಜೆ ೭ ರಿಂದ ಭಜನೆ, ೮ ಗಂಟೆಗೆ ರಥೋತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಫಲಮಂತ್ರಾಕ್ಷತೆ ಸ್ವೀಕರಿಸಿ, ಸಾರ್ವಭೌಮರ ಅನುಗ್ರಹಕ್ಕೆ ಪಾತ್ರರಾಗುವಂತೆ ಶ್ರೀ ಮಠದ ಆಡಳಿತ ಮಂಡಳಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ