ಕನ್ನಡಪ್ರಭ ವಾರ್ತೆ ಮಡಿಕೇರಿ
ಸಂಘ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ರಘುಪತಿ ಭಟ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಧನಂಜ್ ಸರ್ಜಿ, ಕಾಂಗ್ರೆಸ್ನಿಂದ ಟಿಕೆಟ್ ನೀಡುತ್ತೇವೆ ಅಂತ ಬಹಳ ಒತ್ತಡ ಇತ್ತು. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಯಾವುದಕ್ಕೂ ಮಣಿಯದೆ ಬಿಜೆಪಿಯಲ್ಲಿ ಇದ್ದೇನೆ. ನನ್ನ ಬಗ್ಗೆ ಹೇಳಲು ಬೇರೆ ಏನು ಇಲ್ಲ, ಹೀಗಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ರಘುಪತಿ ಭಟ್ಗೆ ಟಾಂಗ್ ನೀಡಿದರು.
ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂಬ ಭಟ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಕಾರ್ಯಕರ್ತರ ಬಲದಿಂದ ನಿಂತಿದೆ. ಬಿಜೆಪಿಗೆ ನಾನು ಹೊಸಬನಲ್ಲ. ೧೦ನೇ ವಯಸಿನಿಂದಲೇ ಸ್ವಯಂ ಸೇವಕನಾಗಿದ್ದು, ಜೀವ ಇರುವ ತನಕ ನಾನು ಸ್ವಯಂ ಸೇವಕನಾಗಿಯೇ ಇರುತ್ತೇನೆ ಎಂದು ತಿರುಗೇಟು ನೀಡಿದರು. ಬಿಜೆಪಿಗೆ ಇರುವುದು ಒಬ್ಬರೆ ಅಭ್ಯರ್ಥಿ. ಸೂಕ್ತ ಅಭ್ಯರ್ಥಿಯನ್ನು ಸಂಘಟನೆಯ ಹಿರಿಯರು ಸೂಚಿಸಿದ್ದಾರೆ. ಸಾಮಾಜಿಕ, ಆರೋಗ್ಯ ಕ್ಷೇತ್ರದಲ್ಲಿ ದುಡಿದ ಒಳ್ಳೆಯ ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ. ರಘುಪತಿ ಭಟ್ಗೆ ಮೂರು ಬಾರಿ ಎಂ.ಎಲ್.ಎ. ಸೀಟ್ ಕೊಟ್ಟಿರೋದು ಬಿಜೆಪಿ ಎಂಬುದು ಗೊತ್ತಿದೆಯಾ ಎಂದು ಪ್ರಶ್ನಿಸಿದರು.ಪಕ್ಷದಲ್ಲಿ ಹಿರಿಯರ ತೀರ್ಮಾನ ಅಂತಿಮ. ಅದರಂತೆ ಚುನಾಚಣಾ ಕೆಲಸ ನಡೆಯುತ್ತೆ ಎಂದು ಧನಂಜಯ್ ಸರ್ಜಿ ಸ್ಪಷ್ಟಪಡಿಸಿದರು. ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ತೆರಳಿ ಪಕ್ಷ ಪ್ರಮುಖರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಡಿಕೇರಿಯಲ್ಲಿರುವ ಬಿಜೆಪಿ ಕಚೇರಿಗೆ ತೆರಳಿ ತಮ್ಮ ಗೆಲವಿಗೆ ಶ್ರಮಿಸುವಂತೆ ಪಕ್ಷ ಪ್ರಮುಖರಲ್ಲಿ ಮನವಿ ಮಾಡಿದರು.