ಬಳ್ಳಾರಿ: ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮತ್ತು ಅವರ ಆರೋಗ್ಯವು ಪೌಷ್ಟಿಕಾಂಶಯುತವಾಗಿ ಬೆಳೆಯಲು ರಾಗಿ ಮಾಲ್ಟ್ ಸಹಕಾರಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ತಿಳಿಸಿದರು.
ಮಕ್ಕಳ ಆರೋಗ್ಯ ಬೆಳವಣಿಗೆಗೆ ಪೂರಕವಾಗಿ ರಾಜ್ಯ ಸರ್ಕಾರವು 1ರಿಂದ 10ನೇ ತರಗತಿಯ ಎಲ್ಲ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಣೆ ಮಾಡಲು ನಿರ್ಧರಿಸಿದ್ದು, ಇದರಿಂದ ಮಕ್ಕಳಲ್ಲಿ ಇನ್ನಷ್ಟು ಪೌಷ್ಟಿಕತೆ ಹೆಚ್ಚುತ್ತದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಮಾತನಾಡಿ, ಆರೋಗ್ಯವಂತ ಮಗು, ದೇಶದ ಆಸ್ತಿಯಾಗಿ ಬೆಳೆಯುತ್ತಾನೆ. ಹೀಗಾಗಿ ಮಕ್ಕಳು ಆರೋಗ್ಯವಂತರಾಗಿ ಬೆಳೆಯಲು ರಾಜ್ಯ ಸರ್ಕಾರವು ನೂತನ ಕಾರ್ಯಕ್ರಮ ಜಾರಿಗೊಳಿಸಿರುವುದು ಖುಷಿಯ ಸಂಗತಿಯಾಗಿದೆ ಎಂದರು.ಡಯಟ್ನ ಪ್ರಾಂಶುಪಾಲರಾದ ಹನುಮಕ್ಕ ಮಾತನಾಡಿದರು. ಪಾಲಿಕೆಯ ಸದಸ್ಯರಾದ ಕಲ್ಪನಾ, ಜಿಪಂ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ, ಹವಂಭಾವಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ನಿಂಗಪ್ಪ, ಎಸ್ಡಿಎಂಸಿ ಅಧ್ಯಕ್ಷರಾದ ನಾಗಪ್ಪ, ಉಪಾಧ್ಯಕ್ಷ ನೇತಿ ರಘುರಾಮ್ ಸೇರಿದಂತೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.