ರಾಹುಲ್‌ರಿಂದ ದೇಶದಲ್ಲಿ ಪ್ರೀತಿಯ ವಾತಾವರಣ: ಶ್ರೀಜಿತ್

KannadaprabhaNewsNetwork |  
Published : Jun 21, 2025, 12:49 AM IST
ನರಸಿಂಹರಾಜಪುರ ತಾಲೂಕಿನ ದಿವ್ಯ ಕಾರುಣ್ಯ ಆನಂದಾಶ್ರಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಅಗತ್ಯ ವಸ್ತುಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ದಂಡಿನಮಕ್ಕಿ ಮಾತನಾಡಿದರು. | Kannada Prabha

ಸಾರಾಂಶ

ರಾಹುಲ್ ಗಾಂಧಿಯವರು ದೇಶದಲ್ಲಿ ಶಾಂತಿ ಹಾಗೂ ಏಕತೆಗಾಗಿ ಶ್ರಮಿಸಿ ಪ್ರೀತಿಯ ವಾತಾವರಣ ನಿರ್ಮಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದಂಡಿನ ಮಕ್ಕಿ ಶ್ರೀಜಿತ್ ತಿಳಿಸಿದರು.

ರಾಹುಲ್ ಗಾಂಧಿ ಜನ್ಮದಿನಕ್ಕೆ ಅನಾಥಾಶ್ರಮಕ್ಕೆ ಅಗತ್ಯ ವಸ್ತು ವಿತರಣೆ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ರಾಹುಲ್ ಗಾಂಧಿಯವರು ದೇಶದಲ್ಲಿ ಶಾಂತಿ ಹಾಗೂ ಏಕತೆಗಾಗಿ ಶ್ರಮಿಸಿ ಪ್ರೀತಿಯ ವಾತಾವರಣ ನಿರ್ಮಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದಂಡಿನ ಮಕ್ಕಿ ಶ್ರೀಜಿತ್ ತಿಳಿಸಿದರು.

ನಗರದಲ್ಲಿ ಗುರುವಾರ ಯುವ ಕಾಂಗ್ರೆಸ್‌ ನೇತ್ರತ್ವದಲ್ಲಿ ರಾಹುಲ್‌ ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ ಮತ್ತೀಮರ ಸಮೀಪದ ದಿವ್ಯ ಕಾರುಣ್ಯ ಆನಂದ ಆಶ್ರಮದಲ್ಲಿ ಅನಾಥರಿಗೆ ಅಗತ್ಯ ವಸ್ತುಗಳನ್ನು ವಿತರಿಸಿ ಮಾತನಾಡಿದರು. ಇಂದಿನ ಪರಿಸ್ಥಿತಿಯಲ್ಲಿ ದೇಶದ ವಿವಿಧ ಕಡೆ ದ್ವೇಷದ ಭಾವನೆ ಬಿತ್ತಲಾಗುತ್ತಿದೆ. ಯುವ ಕಾಂಗ್ರೆಸ್ ಪ್ರೀತಿಯ ವಾತಾವರಣ ನಿರ್ಮಾಣ ಮಾಡುತ್ತಿದೆ. ರಾಹುಲ್ ಗಾಂಧಿ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಲು ಶಾಲಾ ಕಾಲೇಜುಗಳಿಗೆ ಪುಸ್ತಕ ವಿತರಣೆ, ರಕ್ತದಾನ, ನೇತ್ರದಾನ,ಅನಾಥರಿಗೆ ಅಗತ್ಯವಸ್ತುಗಳ ಪೂರೈಕೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಮಾತನಾಡಿ, ಬುದ್ದಿ ಮಾಂದ್ಯ ಮಕ್ಕಳು ದೇ‍ವರ ಮಕ್ಕಳಿದ್ದಂತೆ. ಬುದ್ದಿ ಮಾಂದ್ಯರನ್ನು ಪ್ರತಿ ನಿತ್ಯ ನೋಡಿಕೊಳ್ಳುವುದು ಸುಲಭದ ಮಾತಲ್ಲ.ದಿವ್ಯ ಕಾರುಣ್ಯ ಆನಂದಾಶ್ರಮದವರು ಬುದ್ದಿ ಮಾಂದ್ಯರನ್ನು, ಅನಾಥರನ್ನು ಮಕ್ಕಳಂತೆ ಸಲುಹುತ್ತಿದ್ದಾರೆ ಎಂದರು.

ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಮಾತನಾಡಿ, ಸೇವೆ ಎಂಬುದು ಭಗವಂತ ಕಲ್ಪಿಸಿಕೊಟ್ಟ ಅವಕಾಶವಾಗಿದೆ. ಇಂದು ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ದಿನ ಅನಾಥರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನಾಥಾಶ್ರಮಗ‍ಳಿಗೆ ಸಹಾಯ ಮಾಡಲಾಗುವುದು ಎಂದರು.

ಯುವ ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಹಾಗೂ ಕೆಡಿಪಿ ಸದಸ್ಯ ಸಾಜು, ಶೃಂಗೇರಿ ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾ ಚರಣ್ ಮಾತನಾಡಿದರು. ಅನಾಥರಿಗೆ ಬೆಡ್ ಶೀಟು, ದಿನಸಿ ವಸ್ತುಗಳು, ನಿತ್ಯ ಬಳಕೆಯ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.

ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಮಂಜೇಶ್, ಅಭಿಲಾಷ್,ಕೌಶಿಕ್ ಪಟೇಲ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಬೆನ್ನಿ, ಗ್ಯಾರಂಟಿ ಸಮಿತಿ ಸದಸ್ಯ ರಘು, ಪಿ.ಸಿ.ಎ.ಆರ್.ಡಿ.ಬ್ಯಾಂಕಿನ ನಿರ್ದೇಶಕ ದೇವಂತರಾಜ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಯುವ ಕಾಂಗ್ರೆಸ್‌ ಮುಖಂಡರಾದ ಕಾರ್ತಿಕ್ ಕಾರ್ಗದ್ದೆ, ವಿವೇಕ್, ನಿದೀಶ್, ಪ್ರಿಯೇಶ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ