ರಾಹುಲ್‌ ಗಾಂಧಿ ಮುಂದಿನ ಪ್ರಧಾನಿ: ಸಚಿವ ಜಮೀರ್ ಅಹ್ಮದ್‌ ಖಾನ್

KannadaprabhaNewsNetwork |  
Published : Apr 18, 2024, 02:20 AM IST
17ಎಚ್‌ಪಿಟಿ2- ಹೊಸಪೇಟೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಮಾತನಾಡಿದರು. | Kannada Prabha

ಸಾರಾಂಶ

ಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

ಹೊಸಪೇಟೆ: ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಭವಿಷ್ಯ ನುಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ರಾಹುಲ್‌ ಗಾಂಧಿ ಪ್ರಧಾನಿಯಾಗುತ್ತಾರೆ ಎಂದರು.

ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ನಾಗೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷದ ಬಗ್ಗೆ ಮಾಜಿ ಸಚಿವ ಬಿ. ಶ್ರೀರಾಮುಲುಗೆ ಭಯವಿದೆ. ನನ್ನಿಂದ ಭಯವಿದೆ ಎನ್ನುವುದು ಸುಳ್ಳು. ನಾಗೇಂದ್ರ ಕಾಂಗ್ರೆಸ್‌ಗೆ ತೃಣ ಇದ್ದಂತೆ. ಈ ಹಿಂದೆ ನಾವಿಬ್ಬರೂ ಬಿಜೆಪಿಯಲ್ಲಿದ್ದವರು. ರಾಜಕೀಯ ಉದ್ದೇಶಗಳಿಂದ ಬೇರೆ ಪಕ್ಷಗಳಲ್ಲಿ ಇದ್ದೇವೆ. ಶ್ರೀರಾಮುಲು ವ್ಯಕ್ತಿತ್ವದ ಬಗ್ಗೆ ನನಗೆ ಯಾವುದೇ ಅಭ್ಯಂತರವಿಲ್ಲ. ವೈಯಕ್ತಿಕವಾಗಿ ಯಾವುದೇ ಸಿಟ್ಟಿಲ್ಲ. ಪಕ್ಷ ಬೇರೆ ಬೇರೆ ಇರುವುದರಿಂದ ಸಿದ್ಧಾಂತ ಬೇರೆ ಬೇರೆಯಾಗಿದೆ. ಹೀಗಾಗಿ ಅವರನ್ನು ಸೋಲಿಸಬೇಕೆಂದುಕೊಂಡಿದ್ದೇವೆ ಎಂದರು.

ಬಳ್ಳಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಪ್ರಚಾರ ಮಾಡುತ್ತಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೋದಿಯವರು ಬಂದು ಪ್ರಚಾರ ಮಾಡಿದರೆ ಕಾಂಗ್ರೆಸ್‌ಗೆ ಏನೂ ವ್ಯತ್ಯಾಸವಾಗಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ