ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ

KannadaprabhaNewsNetwork |  
Published : Feb 20, 2024, 01:50 AM ISTUpdated : Feb 20, 2024, 03:07 PM IST
KS Eshwarappa

ಸಾರಾಂಶ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಚಿತ್ರದುರ್ಗ: ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ವೇಳೆಗೆ ಪರಿಶಿಷ್ಟರಿಗೆ ಆಹ್ವಾನ ನೀಡಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಮಾದಾರ ಚನ್ನಯ್ಯ ಶ್ರೀ, ಕಾಗಿನೆಲೆ ಶ್ರೀ ಸೇರಿ ಅನೇಕರು ಹೋಗಿ ಬಂದಿದ್ದಾರೆ. ಅಯೋಧ್ಯೆಗೆ ತೆರಳಿದ್ದಕ್ಕೆ ಶ್ರೀಗಳು ಆನಂದ ಪಟ್ಟಿದ್ದಾರೆ. ಇದಕ್ಕೆ ರಾಹುಲ್ ಏನು ಹೇಳುತ್ತಾರೆ ಎಂದರು.

ರಾಮಮಂದಿರ ನಿರ್ಮಾಣದಿಂದ ದೇಶದ ಜನರ ಒಗ್ಗೂಡಿಕೆ ಸಾಧ್ಯವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಲಾಭ ಆಗಲಿದೆ. ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ. ಒಂದು ಕಡೆ ಮೋದಿ ಆಡಳಿತ, ಮತ್ತೊಂದು ಕಡೆ ರಾಮ ಬಿಜೆಪಿಯ ಕಾಯಲಿದ್ದಾರೆ ಎಂದರು.

ಮುಖ್ಯಮಂತ್ರಿ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಒಬ್ಬ ನಿರುದ್ಯೋಗಿಗೂ ಈವರೆಗೆ ಒಂದು ರುಪಾಯಿ ಕೊಟ್ಟಿಲ್ಲ.

ಪಾಪರ್ ಆಗಿದ್ದೇವೆಂದು ಹೇಳಲೂ ಸಿಎಂ, ಡಿಸಿಎಂ ಒಂದಾಗಲ್ಲ. ವಿದ್ಯುತ್ ಅಭಾವವಿದ್ದಾಗಲೂ ಅನೇಕ ಸಲ ದರ ಹೆಚ್ಚಿಸಿದ್ದಾರೆ ಎಂದರು.ಮಾದಾರ ಚನ್ನಯ್ಯಶ್ರೀ ಲೋಕಸಭೆಗೆ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ. ಹಾಗೊಂದು ವೇಳೆ ಅವರು ಅಭ್ಯರ್ಥಿಯಾದರೆ ಖುಷಿ ಪಡುವುದಾಗಿ ಈಶ್ವರಪ್ಪ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ