ರಾಮಕೃಷ್ಣ ದಾಸರಿ
ಬಹುನಿರೀಕ್ಷಿತ ಲೋಕಸಭೆ ಚುನಾವಣೆ ಘೋಷಣೆಯಾಗಿ ಮೂರು ದಿನಗಳು ಪೂರ್ಣಗೊಂಡಿದ್ದರು ಸಹ ರಾಯಚೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜಕೀಯದ ಕಾವು ಕಾಣುತ್ತಿಲ್ಲ. ಇದಕ್ಕೆ ಮುಖ್ಯಕಾರಣ ಪಕ್ಷಗಳಿಂದ ಇನ್ನು ಅಧಿಕೃತವಾಗಿ ಅಭ್ಯರ್ಥಿ ಘೋಷಣೆ ಮಾಡದೇ ಇರುವುದಾಗಿದೆ.
ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಇದರಲ್ಲಿ ಪಕ್ಕದ ಯಾದಗಿರಿ ಜಿಲ್ಲೆಯ ಶೋರಾಪುರ (ಸುರಪುರ) ಶಹಾಪುರ, ಯಾದಗಿರಿ ವಿಧಾನಸಭಾ ಕ್ಷೇತ್ರಗಳು ಹಾಗೂ ಜಿಲ್ಲೆಯ ರಾಯಚೂರು ಗ್ರಾಮೀಣ, ರಾಯಚೂರು ನಗರ, ಮಾನ್ವಿ, ದೇವದುರ್ಗ ಮತ್ತು ಲಿಂಗಸುಗೂರು ವಿಧಾನಸಭಾ ಕ್ಷೇತ್ರಗಳು ಸೇರಿವೆ. ಇಡೀ ದೇಶದಲ್ಲಿ ಮಹಾಕದನ ರಣಕಹಳೆ ಶುರುವಾಗಿದ್ದರು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ರಾಜಕೀಯ ವಾತಾವರಣವು ಸಪ್ಪೆಯಾಗಿದೆ.ಆಡಳಿತ ಚುರುಕು-ಪಕ್ಷಗಳು ಮಂಕು:
ಅಭ್ಯರ್ಥಿಗಳ ಘೋಷಣೆ ವಿಳಂಬ:
ಪಕ್ಷಾಂತರ ಪರ್ವದ ಚರ್ಚೆ:
ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳಿಲ್ಲದಿದ್ದರು ಚುನಾವಣೆಗೆ ಸಂಬಂಧಿಸಿದ ಚರ್ಚೆಗಳು ಗಾಢವಾಗಿಯೇ ಸಾಗಿವೆ. ಈ ನಡುವೆ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಷಯದಲ್ಲಿ ಉಭಯ ಪಕ್ಷಗಳು ಕಾದುನೋಡುವ ತಂತ್ರಕ್ಕೆ ಮೊರೆಹೋಗಿವೆ. ಅದರಡಿಯಲ್ಲಿಯೇ ಪಕ್ಷಾಂತರ ಪರ್ವದ ಕಾಲವು ಬರಲಿದೆ ಚರ್ಚೆ ನಡೆದಿದೆ. ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಕೈ ತೊರೆದು ಬಿಜೆಪಿ ಸೇರಿ ಅಂದು ಕಾಂಗ್ರೆಸ್ನಲ್ಲಿದ್ದ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಪರಾಭವಗೊಳಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಹಾಲಿ ಸಂಸದರಿಗೆ ಕೋಕ್ ಕೊಡುವ ಪರಂಪರೆಯನ್ನು ಬಿಜೆಪಿಗರು ಮುಂದುವರೆಸಿದ್ದು, ರಾಯಚೂರು ಕ್ಷೇತ್ರಕ್ಕೆ ಅದು ಅನ್ವಯಗೊಂಡಲ್ಲಿ ರಾಜಾ ಅಮರೇಶ್ವರ ನಾಯಕ ಮತ್ತೆ ಕೈ ಕುಲುಕುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಮತ್ತೊಂದೆಡೆ ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕೊನೆಗಳಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಕೊಟ್ಟು ಬಿಜೆಪಿ ಸೇರಿ ಮಾನ್ವಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡ ಬಿ.ವಿ.ನಾಯಕ ಅವರು ಪ್ರಸ್ತುತ ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಲ್ಲಿ ಮುಂಚುಣಿಯಲ್ಲಿದ್ದು, ಒಂದು ವೇಳೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಿದರೆ ಮತ್ತೆ ಕೈಕಡೆ ಮುಖಮಾಡಲಿದ್ದಾರೆ ಎನ್ನುವ ಸಮಾಲೋಚನೆಗಳು ಇಡೀ ಕ್ಷೇತ್ರದಾದ್ಯಂತ ಸಾಗಿವೆ.