ರಾಮಕೃಷ್ಣ ದಾಸರಿ
ಪ್ರಸಕ್ತ ಸಾಲಿನ ಬೇಸಿಯ ತಾಪವು ದಿನೇ ದಿನೆ ತಾರಕಕ್ಕೇರುತ್ತಿದ್ದು, ಬಿಸಿಲನಾಡಿನಲ್ಲಿ ಗರಿಷ್ಠ ತಾಪಮಾನವು ತಾಂಡವಾಡುತ್ತಿರುವುದರಿಂದ ಜನರ ಬದುಕಿನಲ್ಲಿ ಏರುಪೇರಾಗುತ್ತಿದೆ.
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೇಸಿಗೆಯ ಸೂರ್ಯನ ತಾಪವು ಗರಿಷ್ಠ ಪ್ರಮಾಣ ತಲುಪುತ್ತಿರುವುದು ಹಲವಾರು ಸಮಸ್ಯೆಗಳನ್ನು ತಂದೊಡ್ಡುವಂತೆ ಮಾಡುತಿದೆ. ಬೇಸಿಗೆ ಆರಂಭದಿಂದಲೂ 40 ಡಿಗ್ರಿ ಸೆಲ್ಸಿಯಸ್ ಹಾಸುಪಾಸಿನಲ್ಲಿ ದಾಖಲಾಗುತ್ತಿದ್ದ ಗರಿಷ್ಠ ಉಷ್ಣಾಂಶವು ಕಳೆದ ಹತ್ತು ದಿನಗಳಿಂದ 42 ಡಿಗ್ರಿಯಲ್ಲಿತ್ತು. ಶನಿವಾರ 43 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಇದು ಪ್ರಸಕ್ತ ಸಾಲಿನ ಅತ್ಯಂತ ಗರಿಷ್ಠ ತಾಪಮಾನವಾಗಿದೆ. ಇನ್ನು ರಾತ್ರಿ ಸಮಯದಲ್ಲಿ ಸಹ ವಾತಾವರಣದಲ್ಲಿ ಒಣಗಾಳಿ ಹೆಚ್ಚಾಗುರುತ್ತಿರುವುದರಿಂದ 25 ರಿಂದ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವು ದಾಖಲಾಗುತ್ತಿರುವುದು ಜಿಲ್ಲೆ ಜನಸಾಮಾನ್ಯರಲ್ಲಿ ಬೇಸಿಗೆಯ ಹಲವಾರು ಸಮಸ್ಯೆಗಳನ್ನು ಅನುಭವಿಸುವಂತೆ ಮಾಡಿದೆ.ಹೆಚ್ಚಳಕ್ಕೆ ಕಾರಣ:ಬಿಸಿಲನಾಡು ರಾಯಚೂರಿನಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಗರಿಷ್ಠ ತಾಪಮಾನವು ಏರಿಕೆಯಾಗುತ್ತಲೆನೇ ಬರುತ್ತಿದೆ. ಕಳೆದ 2016ರಲ್ಲಿ 43.10 ಗರಿಷ್ಠ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ನಂತರದ ಬೇಸಿಗೆಯಲ್ಲಿ ಗರಿಷ್ಠ ಉಷ್ಣಾಂಶ 40 ರಿಂದ 42ರ ವರೆಗೆ ದಾಖಲಾಗಿತ್ತು ಮತ್ತೆ 2019ರಲ್ಲಿ ಗರಿಷ್ಠ ಉಷ್ಣಾಂಶವು 43 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಆದರೆ ಈ ವರ್ಷ ಏಪ್ರಿಲ್ ಆರಂಭದಲ್ಲಿಯೇ 43 ಗಡಿಯನ್ನು ದಾಟಿರುವ ತಾಪಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳನ್ನು ಗೋಚರಿಸುವಂತೆ ಮಾಡಿದೆ.
ಟಿಪ್ಸ್ ಪಾಲಿಸಿ:
-ಶಾಂತಪ್ಪ, ಹವಮಾನ ವಿಭಾಗದ ಅಧಿಕಾರಿ, ಕೃಷಿ ವಿಜ್ಞಾನಗಳ ವಿವಿ, ರಾಯಚೂರುಜಿಲ್ಲೆಯಲ್ಲಿ ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು.