ಕನ್ನಡಪ್ರಭ ವಾರ್ತೆ ಚಿಂಚೋಳಿ
ತಾಲೂಕಿನ ಮಿರಿಯಾಣ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಸರ್ಕಾರದಿಂದ ಯಾವುದೇ ಅನುಮತಿ ಪಡೆದುಕೊಳ್ಳದೆ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ವೆಂಕಟರಾಮಯ್ಯ ವೀರಾಸ್ವಾಮಿ ಕ್ಲಿನಿಕ್ ಮೇಲೆ ದಾಳಿ ಮಾಡಿ, ಆತನ ಬಳಿ ಇರುವ ಮಾತ್ರೆ, ಔಷಧಿ ಬಾಟಲ್ ಹಾಗೂ ಬಿ.ಪಿ. ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇತನು ಯಾವುದೇ ವೈದ್ಯಕೀಯ ಪರೀಕ್ಷೆ ಪಾಸಾಗಿಲ್ಲ ಕೇವಲ ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾಗಿದ್ದಾನೆ. ೬೫ ವರ್ಷದ ವೆಂಕಟರಾಮಯ್ಯ ಇತನು ತೆಲಂಗಾಣ ರಾಜ್ಯದ ತಾಂಡೂರ ನಗರದಿಂದ ಮಾತ್ರೆ ಗ್ಲೂಕೋಸ್ ಹಾಗೂ ಔಷಧಿ ತಂದು ರೋಗಿಗಳ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಆತನಿಗೆ ವಿಚಾರಿಸಿದಾಗ ನನ್ನ ಬಳಿ ವೈದ್ಯಕೀಯ ದಾಖಲೆಗಳಿವೆ ಎಂದು ತಿಳಿಸಿದ್ದಾರೆ. ಅವುಗಳನ್ನು ಟಿಎಚ್ಓ ಕಚೇರಿಗೆ ಸಲ್ಲಿಸುವಂತೆ ಸೂಚನೆ ನೀಡಿ ನೋಟಿಸ್ ಜಾರಿ ಮಾಡಲಾಗಿದೆ. ಕ್ಲಿನಿಕ್ ಬಾಗಿಲು ಮುಚ್ಚಿ ಸೀಜ್ ಮಾಡಲಾಗಿದೆ ಎಂದು ಹೇಳಿದರು.ಮಿರಿಯಾಣ ಗ್ರಾಮದಲ್ಲಿ ವೈದ್ಯರು, ತಹಸೀಲ್ದಾರರು ಕ್ಲಿನಿಕ್ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬ ಸುದ್ದಿ ತಿಳಿದ ಕೆಲವು ನಕಲಿ ವೈದ್ಯರು ತಮ್ಮ ಕ್ಲಿನಿಕ್ ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ ಆದರೆ ದಾಳಿ ನಿರಂತರವಾಗಿ ನಡೆಯಲಿದೆ.